Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...