Homeಮುಖಪುಟಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ 'ಸೈಬರ್ ಭಯೋತ್ಪಾದನೆ' ಪ್ರಕರಣ ದಾಖಲಿಸಿ ಜೈಲಿಗಟ್ಟಿದ...

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

- Advertisement -
- Advertisement -

ಯೂಟ್ಯೂಬ್‌ನಲ್ಲಿ ‘ಹಿಜಾಬ್ ಚಾಲೆಂಜ್’ ವಿಡಿಯೋ ಅಪ್ಲೋಡ್ ಮಾಡಿದ್ದ ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು, ಆತನನ್ನು ಜೈಲಿಗಟ್ಟಿದ ಘಟನೆ ನಡೆದಿದೆ.

ಅನಶ್ ಅಹ್ಮದ್ (21) ಬಂಧನಕ್ಕೊಳಗಾದ ಯುವಕ. ಕೊಯಮತ್ತೂರಿನ ಪೊಧನೂರು ನಿವಾಸಿಯಾಗಿರುವ ಅನಶ್, ಫ್ರೀಲ್ಯಾನ್ಸ್ ವಿಡಿಯೋ ಜಾಕಿಯಾಗಿದ್ದಾನೆ. ಸೆಪ್ಟೆಂಬರ್ 5ರಂದು ಅನಶ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದ ಕಾರಣ ಕೊಯಮತ್ತೂರು ಜೈಲು ಪಾಲಾಗಿದ್ದ ಅನಶ್, ಸುಮಾರು 56 ದಿನಗಳ ಬಳಿಕ ಅಕ್ಟೋಬರ್ 30ರಂದು ಬಿಡುಗಡೆಯಾಗಿದ್ದಾನೆ.

“ಯೂಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಕ್ಕೆ ಅನಶ್ ಜೈಲು ಸೇರಿರುವುದು, ಪ್ರಸ್ತುತ ಭಾರತ ಮತ್ತು ಕರ್ನಾಟಕದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಾಸ್ತವ ಪರಿಸ್ಥಿತಿಯನ್ನು ಬಿಂಬಿಸುತ್ತದೆ” ಎಂದು ಅನಶ್ ಪರ ವಕೀಲ ಪುಲಿಯಾಂತೋಪ್ ಮೋಹನ್ ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ : ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಕಸ್ವಾ ಟಿವಿ’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅನಶ್ ಹಿಜಾಬ್ ಚಾಲೆಂಜ್ ವಿಡಿಯೋ ಅಪ್ಲೋಡ್ ಮಾಡಿದ್ದ. ಪ್ರಸ್ತುತ ತೆಗೆದು ಹಾಕಲಾಗಿರುವ ಆ ವಿಡಿಯೋದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತು, ಅಲ್ಲಿ ಓಡಾಡುವ ಮಹಿಳೆಯರಿಗೆ ಹಿಜಾಬ್ ಧರಿಸಿ ನೋಡುತ್ತೀರಾ? ಎಂದು ಕೇಳುವ ದೃಶ್ಯವಿತ್ತು. ಆ ವಿಡಿಯೋವನ್ನು ಕೊಯಮತ್ತೂರಿನ ರೇಸ್‌ ಕೋರ್ಸ್‌ ಬಳಿ ರೆಕಾರ್ಡ್ ಮಾಡಲಾಗಿತ್ತು ಎಂದು ವರದಿಗಳು ಹೇಳಿವೆ.

ವಿದೇಶಗಳಲ್ಲಿ ನಡೆಯುತ್ತಿದ್ದ ಹಿಜಾಬ್ ಚಾಲೆಂಜ್ ಈಗ ಭಾರತಕ್ಕೂ ಕಾಲಿಟ್ಟಿದೆ. ಪ್ರವಾಸಿ ತಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲುವ ಮುಸ್ಲಿಂ ಯುವತಿಯರು, ಅಲ್ಲಿ ಓಡಾಡುವ ಮಹಿಳೆಯರಿಗೆ ಹಿಜಾಬ್ ಧರಿಸಿ ಹೇಗೆ ಕಾಣುತ್ತೀರಿ ಎಂದು ನೋಡುತ್ತೀರಾ? ಎಂದು ಕೇಳುತ್ತಾರೆ. ಆಗ, ಧರ್ಮಾತೀತವಾಗಿ ಇಷ್ಟ ಇರುವ ಮಹಿಳೆಯರು ಒಂದು ಸಲ ಹಿಜಾಬ್ ಧರಿಸಿ ತಮ್ಮನ್ನು ತಾವು ಹೇಗೆ ಕಾಣುತ್ತಾರೆ ಎಂದು ಕನ್ನಡಿ ಹಿಡಿದು ನೋಡುತ್ತಾರೆ. ಬಳಿಕ, ಹಿಜಾಬ್ ಕಳಚಿ ವಾಪಸ್ ಕೊಟ್ಟು ತೆರಳುತ್ತಾರೆ. ಇಲ್ಲಿ ಯಾರಿಗೂ ಹಿಜಾಬ್ ಧರಿಸಿಲು ಬಲವಂತ ಮಾಡುವುದಿಲ್ಲ, ಮನವಿ ಮಾಡಲಾಗುತ್ತದೆ. ಜನರು ಇಷ್ಟವಿದ್ದರೆ ಧರಿಸಬಹುದು. ಈ ಮೂಲಕ ಮುಸ್ಲಿಂ ಮಹಿಳೆಯರ ಉಡುಪಾದ ಹಿಜಾಬ್ ಅನ್ನು ಇತರ ಧರ್ಮೀಯರಿಗೆ ಪರಿಚಯಿಸಲಾಗುತ್ತದೆ.

ಈ ಪ್ರಕರಣದಲ್ಲಿ ಕೊಯಮತ್ತೂರು ರೇಸ್‌ ಕೋರ್ಸ್ ಬಳಿ ಹಿಜಾಬ್ ಚಾಲೆಂಜ್ ನಡೆಸಿದ್ದ ವಿಡಿಯೋವನ್ನು ಕಸ್ವಾ ಟಿವಿ ಯೂಟ್ಯೂಬ್ ಚಾನೆಲ್‌ನಲ್ಲಿ ಅನಶ್ ಹಂಚಿಕೊಂಡಿದ್ದ. ಇದು ಬಲಪಂಥೀಯ ಗುಂಪಿನ ಕೆಂಗಣ್ಣಿಗೆ ಗುರಿಯಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿತ್ತು. ಮುಂದುವರಿದು, ಬಲಪಂಥೀಯ ಸಂಘಟನೆ ಭಾರತ್ ಸೇನೆಯ ಜಿಲ್ಲಾ ಸಂಯೋಜಕ ಎಸ್‌. ಕುಮರೇಶನ್ ಎಂಬವರು ವಿಡಿಯೋ ಧರ್ಮಗಳ ನಡುವೆ ಉದ್ವಿಗ್ನತೆ ಉಂಟು ಮಾಡುತ್ತದೆ ಎಂದು ಆರೋಪಿಸಿ, ಅನಶ್ ವಿರುದ್ದ ದೂರು ದಾಖಲಿಸಿದ್ದರು.

ದೂರು ಆಧರಿಸಿ ಅನಶ್ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 352 ಮತ್ತು 353(2) ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆಗೆ ಶಿಕ್ಷೆ) ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನಶ್‌ನ ಬಂಧಿಸಿದ್ದರು. ಬಳಿಕ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಪ್ರಕರಣದಲ್ಲಿ ಜಾಮೀನು ಕೋರಿ ಅನಶ್ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿಗಳನ್ನು ಕೊಯಮತ್ತೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಬಳಿಕ ಆತ ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿ ಜಾಮೀನು ಪಡೆದಿದ್ದಾನೆ.

ಅನಶ್ ಜಾಮೀನು ಅರ್ಜಿಯ ವಿಚಾರಣೆಯ ವೇಳೆ ಆತನ ಪರ ವಾದ ಮಂಡಿಸಿದ ವಕೀಲ ಮೋಹನ್ ಅವರು, “ಯಾರನ್ನೂ ಹಿಜಾಬ್ ಧರಿಸುವಂತೆ ಒತ್ತಾಯಿಸಿಲ್ಲ. ಜನರು ಸ್ವಯಂ ಪ್ರೇರಿತರಾಗಿ ಧರಿಸಿದ್ದಾರೆ. ಇದರಲ್ಲಿ ಯಾವುದೇ ಸಮುದಾಯಗಳ ನಡುವೆ ವಿವಾದ ಸೃಷ್ಟಿಸುವ ಉದ್ದೇಶವಿರಲಿಲ್ಲ. ಅಲ್ಲದೆ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಯಾರೂ ಕೂಡ ದೂರು ದಾಖಲಿಸಿಲ್ಲ ಎಂದಿದ್ದಾರೆ. ನ್ಯಾಯಮೂರ್ತಿ ಪಿ ಧನಬಾಲ್ ಅವರು ಅನಶ್ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಪರಿಗಣಿಸಿ ಮತ್ತು ಆತನ ಜೈಲುವಾಸ ಅನುಭವಿಸಿದ ಅವಧಿಯನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ವಕೀಲ ಮೋಹನ್ ಅವರು, “ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಅನಶ್ ವಿರುದ್ದ ಐಟಿ ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆ) ಪ್ರಕರಣ ಹೂಡಿರುವುದು ‘ನ್ಯಾಯಸಮ್ಮತವಲ್ಲ’. ಏಕೆಂದರೆ, ವಿಡಿಯೋ ಅಪ್ಲೋಡ್ ಮಾಡಿರುವುದರ ಹಿಂದೆ ಯಾವುದೇ ಅಪರಾಧ ಎಸಗುವ ಉದ್ದೇಶ ಇರಲಿಲ್ಲ. ಸೈಬರ್ ಭಯೋತ್ಪಾದನೆ ಎಂದರೆ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಹಾಕುವ ಚಟುವಟಿಕೆಗಳಿಂದ ಕೂಡಿರಬೇಕು. ಇದೊಂದು ಸಾಮಾನ್ಯ ಸೈಬರ್ ಪ್ರಕರಣ. ವಿಡಿಯೋ ಸ್ಪಷ್ಟವಾಗಿ ಭಾರತೀಯ ಸಂವಿಧಾನದ 25 ನೇ ಪರಿಚ್ಛೇದದ ಅಡಿಯಲ್ಲಿ ಬರುತ್ತದೆ. 25ನೇ ಪರಿಚ್ಛೇದ ನಮಗೆ ನಮ್ಮ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

“ಸೆಕ್ಷನ್ 66 ಎಫ್ ಸೈಬರ್ ಭಯೋತ್ಪಾದನೆಯ ಶಿಕ್ಷೆಗೆ ಸಂಬಂಧಿಸಿದೆ. ಭಾರತದ ಸಾರ್ವಭೌಮತೆ, ಸಮಗ್ರತೆ, ಭದ್ರತೆ ಅಥವಾ ಸ್ನೇಹ ಸಂಬಂಧಗಳಿಗೆ ಬೆದರಿಕೆಯೊಡ್ಡುವ ಕೃತ್ಯಗಳನ್ನು ಈ ಸೆಕ್ಷನ್ ಅಪರಾಧ ಎಂದು ಪರಿಗಣಿಸುತ್ತದೆ. ವಿಶೇಷವಾಗಿ ಆ ಕೃತ್ಯಗಳು ಕಂಪ್ಯೂಟರ್‌ಗಳು ಅಥವಾ ಇತರ ಡಿಜಿಟಲ್ ಸಾಧನಗಳ ಬಳಕೆಯನ್ನು ಒಳಗೊಂಡಿರಬೇಕು. ಈ ಪ್ರಕರಣದಲ್ಲಿ ಅನಶ್ ಅಪ್ಲೋಡ್ ಮಾಡಿರುವ ವಿಡಿಯೋಗೆ ಸಂಬಂಧಿಸಿ ಫೇಸ್‌ಬುಕ್‌ನಲ್ಲಿ ನಡೆದ ಪರ-ವಿರೋಧ ಚರ್ಚೆಯನ್ನು ಆಧರಿಸಿ ಪೊಲೀಸರು ಸೆಕ್ಷನ್ 66 ಎಫ್ ಅನ್ವಯಿಸಿದ್ದಾರೆ. ಇದರಲ್ಲಿ ಪೊಲೀಸರ ದುರದ್ದೇಶ ಎದ್ದು ಕಾಣುತ್ತದೆ. ಅನಶ್ ಅಪ್ಲೋಡ್ ಮಾಡಿರುವ ವಿಡಿಯೋದಿಂದ ನಮಗೆ ಸಮಸ್ಯೆಯಾಗಿದೆ ಎಂದು ಯಾರೂ ಕೂಡ ದೂರು ನೀಡಿಲ್ಲ ಮತ್ತು ವಿಡಿಯೋ ಇತ್ಯಾದಿಗಳ ಮೂಲಕ ಹೇಳಿಕೊಂಡಿಲ್ಲ. ಅನಶ್ ವಿಡಿಯೋ ಅಪ್ಲೋಡ್ ಮಾಡಿದ ಬಳಿಕ ಸಾವರ್ಜನಿಕ ಅಶಾಂತಿ ಸೃಷ್ಟಿಸುವ ಯಾವುದೇ ಪ್ರತಿಭಟನೆಗಳು ನಡೆದಿಲ್ಲ” ಎಂದು ವಕೀಲ ಮೋಹನ್ ವಿವರಿಸಿದ್ದಾರೆ.

ಕೇವಲ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಅನಶ್ ವಿರುದ್ದ ಸೈಬರ್ ಭಯೋತ್ಪಾದನೆ ಪ್ರಕರಣ ಹೂಡಿದ ಪೊಲೀಸರ ಕ್ರಮ ಸರಿಯಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...