Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...