Homeಅಂತರಾಷ್ಟ್ರೀಯUS Elections 2024: ಟ್ರಂಪ್ ಜಯಭೇರಿ; ಸೋತ ಕಮಲ

US Elections 2024: ಟ್ರಂಪ್ ಜಯಭೇರಿ; ಸೋತ ಕಮಲ

- Advertisement -
- Advertisement -

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ಡೊನಾಲ್ಡ್‌ ಟ್ರಂಪ್, 2024ರ ಚುನಾವಣೆಯಲ್ಲಿ ವಿಜಯಿಯಾಗಿದ್ದು, ಶ್ವೇತಭವನಕ್ಕೆ ಮತ್ತೆ ಪುನರಾಗಮಿಸಲಿದ್ದಾರೆ. ತನ್ನ ಮೊದಲ ವಿಜಯ ಭಾಷಣದಲ್ಲಿ ಮಾತನಾಡಿದ ಟ್ರಂಪ್ “ನಾವು ತೀವ್ರ ಸುರಕ್ಷಿತ ಮತ್ತು ಸಮೃದ್ಧ ಅಮೇರಿಕಾ  ನಿರ್ಮಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ. US Elections 2024

ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಪರವಾಗಿ ಗಣನೀಯವಾಗಿ ಪ್ರಚಾರ ಮಾಡಿದ ಎಕ್ಸ್‌(ಟ್ವಿಟರ್) ಮಾಲಿಕ ಎಲೋನ್ ಮಸ್ಕ್‌ ಅವರನ್ನು ಟ್ರಂಪ್ ಭಾಷಣದಲ್ಲಿ ನೆನಪಿಸಿಕೊಂಡಿದ್ದಾರೆ. ಎಲೋನ್‌ ಮಸ್ಕ್ ಅವರು ರಿಪಬ್ಲಿಕ್ ಪಕ್ಷದ ಮುಖವಾಣಿಯಂತೆ X ಮತ್ತು ಅವರ ಖಾತೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಬೆಂಬಲಿಗರು “ಎಲೋನ್! ಎಲೋನ್!” ಎಂದು ಕೂಗಲು ಪ್ರಾರಂಭಿಸಿದಾಗ, “ಸ್ಟಾರ್ ಒಬ್ಬರು ಹುಟ್ಟಿದ್ದಾರೆ; ಎಲೋನ್ ಮಸ್ಕ್” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ ಯುಎಫ್‌ಸಿಯ ಸಿಇಒ ಡಾನಾ ವೈಟ್ ಮತ್ತು ಪಾಡ್‌ಕಾಸ್ಟರ್ ಜೋ ರೋಗನ್ ಅವರ ಬೆಂಬಲಕ್ಕಾಗಿ ಕೂಡಾ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಮೆರಿಕದ ಎಲ್ಲಾ ರಾಜ್ಯಗಳಲ್ಲಿ ಬಿರುಸಿನ ಜಟಾಪಟಿ ನಡೆದಿದ್ದರೂ, ಸ್ವಿಂಗ್ ರಾಜ್ಯಗಳ ಬಹುತೇಕ ಮತದಾರರ ಮನಸ್ಸು ಗೆಲ್ಲಲು ಕಮಲಾ ಹ್ಯಾರಿಸ್‌ಗೆ ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಸ್ವಿಂಗ್ ರಾಜ್ಯಗಳ ಮತದಾರರು ಟ್ರಂಪ್ ಅವರ ಪರವಾಗಿ ಮತ ಹಾಕಿದ್ದಾರೆ. ಕಮಲಾ ಮತ್ತು ಟ್ರಂಪ್ ನಡುವಿನ ಸ್ಪರ್ಧೆಯು ವಿಶ್ವದಾದ್ಯಂತ ತೀವ್ರ ಕುತೂಹಲ ಹುಟ್ಟುಹಾಕಿತ್ತು. US Elections 2024

ತನ್ನ ಕೊನೆಯ ಭಾಷಣಗಳಲ್ಲಿ ಕಮಲಾ ಅವರು ಭರವಸೆ, ಏಕತೆ ಮತ್ತು ಮಹಿಳಾ ಹಕ್ಕುಗಳ ವಿಷಯಗಳನ್ನು ಒತ್ತಿಹೇಳಿದ್ದರು. ಅದಾಗ್ಯೂ ಮತದಾರರು ಅವರನ್ನು ಕೈ ಹಿಡಿಯಲಿಲ್ಲ. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಟ್ರಂಪ್ ಪ್ರಸ್ತುತ ಹ್ಯಾರಿಸ್ ವಿರುದ್ಧ 267-224 ಮುನ್ನಡೆ ಸಾಧಿಸಿದ್ದಾರೆ.

78 ವರ್ಷಗಳ ಟ್ರಂಪ್ ಜುಲೈನಲ್ಲಿ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (RNC)ನಲ್ಲಿ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸಿದ ನಂತರ ಕೂಡಾ ಅಧ್ಯಕ್ಷೀಯ ಚುನಾವಣೆಗೆ ಆಯ್ಕೆಯಾದ ಮೊದಲ ಮಾಜಿ ಅಧ್ಯಕ್ಷರಾಗಿ ಅವರು ಹೊರಹೊಮ್ಮಿದ್ದಾರೆ.

ಕಮಲಾ ಹ್ಯಾರಿಸ್ ಅವರ ಔಪಚಾರಿಕ ಆಯ್ಕೆ ಆಗಸ್ಟ್ 2024 ರಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ನಡೆಯಿತು. ಒಂದು ವೇಳೆ ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರು ಗೆಲುವು ಕಂಡಿದ್ದರೆ, ಅವರು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದ ಅಧ್ಯಕ್ಷೆಯಾಗಿ ಅಧಿಕಾರ ಪಡೆದ ಮೊದಲ ಕಪ್ಪು ಮತ್ತು ಏಷ್ಯನ್ ಮೂಲದ ಮೊದಲ ಮಹಿಳೆಯಾಗುತ್ತಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...