Homeಅಂತರಾಷ್ಟ್ರೀಯUS Elections 2024: ಟ್ರಂಪ್ ಜಯಭೇರಿ; ಸೋತ ಕಮಲ

US Elections 2024: ಟ್ರಂಪ್ ಜಯಭೇರಿ; ಸೋತ ಕಮಲ

- Advertisement -
- Advertisement -

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಹಲವಾರು ಹಿನ್ನಡೆಗಳನ್ನು ಅನುಭವಿಸಿದ್ದ ಡೊನಾಲ್ಡ್‌ ಟ್ರಂಪ್, 2024ರ ಚುನಾವಣೆಯಲ್ಲಿ ವಿಜಯಿಯಾಗಿದ್ದು, ಶ್ವೇತಭವನಕ್ಕೆ ಮತ್ತೆ ಪುನರಾಗಮಿಸಲಿದ್ದಾರೆ. ತನ್ನ ಮೊದಲ ವಿಜಯ ಭಾಷಣದಲ್ಲಿ ಮಾತನಾಡಿದ ಟ್ರಂಪ್ “ನಾವು ತೀವ್ರ ಸುರಕ್ಷಿತ ಮತ್ತು ಸಮೃದ್ಧ ಅಮೇರಿಕಾ  ನಿರ್ಮಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ” ಎಂದು ಹೇಳಿದ್ದಾರೆ. US Elections 2024

ಅಧ್ಯಕ್ಷೀಯ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಪರವಾಗಿ ಗಣನೀಯವಾಗಿ ಪ್ರಚಾರ ಮಾಡಿದ ಎಕ್ಸ್‌(ಟ್ವಿಟರ್) ಮಾಲಿಕ ಎಲೋನ್ ಮಸ್ಕ್‌ ಅವರನ್ನು ಟ್ರಂಪ್ ಭಾಷಣದಲ್ಲಿ ನೆನಪಿಸಿಕೊಂಡಿದ್ದಾರೆ. ಎಲೋನ್‌ ಮಸ್ಕ್ ಅವರು ರಿಪಬ್ಲಿಕ್ ಪಕ್ಷದ ಮುಖವಾಣಿಯಂತೆ X ಮತ್ತು ಅವರ ಖಾತೆಯನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಬೆಂಬಲಿಗರು “ಎಲೋನ್! ಎಲೋನ್!” ಎಂದು ಕೂಗಲು ಪ್ರಾರಂಭಿಸಿದಾಗ, “ಸ್ಟಾರ್ ಒಬ್ಬರು ಹುಟ್ಟಿದ್ದಾರೆ; ಎಲೋನ್ ಮಸ್ಕ್” ಎಂದು ಟ್ರಂಪ್ ಹೇಳಿದ್ದಾರೆ. ಜೊತೆಗೆ ಯುಎಫ್‌ಸಿಯ ಸಿಇಒ ಡಾನಾ ವೈಟ್ ಮತ್ತು ಪಾಡ್‌ಕಾಸ್ಟರ್ ಜೋ ರೋಗನ್ ಅವರ ಬೆಂಬಲಕ್ಕಾಗಿ ಕೂಡಾ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಮೆರಿಕದ ಎಲ್ಲಾ ರಾಜ್ಯಗಳಲ್ಲಿ ಬಿರುಸಿನ ಜಟಾಪಟಿ ನಡೆದಿದ್ದರೂ, ಸ್ವಿಂಗ್ ರಾಜ್ಯಗಳ ಬಹುತೇಕ ಮತದಾರರ ಮನಸ್ಸು ಗೆಲ್ಲಲು ಕಮಲಾ ಹ್ಯಾರಿಸ್‌ಗೆ ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಸ್ವಿಂಗ್ ರಾಜ್ಯಗಳ ಮತದಾರರು ಟ್ರಂಪ್ ಅವರ ಪರವಾಗಿ ಮತ ಹಾಕಿದ್ದಾರೆ. ಕಮಲಾ ಮತ್ತು ಟ್ರಂಪ್ ನಡುವಿನ ಸ್ಪರ್ಧೆಯು ವಿಶ್ವದಾದ್ಯಂತ ತೀವ್ರ ಕುತೂಹಲ ಹುಟ್ಟುಹಾಕಿತ್ತು. US Elections 2024

ತನ್ನ ಕೊನೆಯ ಭಾಷಣಗಳಲ್ಲಿ ಕಮಲಾ ಅವರು ಭರವಸೆ, ಏಕತೆ ಮತ್ತು ಮಹಿಳಾ ಹಕ್ಕುಗಳ ವಿಷಯಗಳನ್ನು ಒತ್ತಿಹೇಳಿದ್ದರು. ಅದಾಗ್ಯೂ ಮತದಾರರು ಅವರನ್ನು ಕೈ ಹಿಡಿಯಲಿಲ್ಲ. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಟ್ರಂಪ್ ಪ್ರಸ್ತುತ ಹ್ಯಾರಿಸ್ ವಿರುದ್ಧ 267-224 ಮುನ್ನಡೆ ಸಾಧಿಸಿದ್ದಾರೆ.

78 ವರ್ಷಗಳ ಟ್ರಂಪ್ ಜುಲೈನಲ್ಲಿ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (RNC)ನಲ್ಲಿ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಮೂಲಕ ಅಪರಾಧಕ್ಕಾಗಿ ಶಿಕ್ಷೆ ಅನುಭವಿಸಿದ ನಂತರ ಕೂಡಾ ಅಧ್ಯಕ್ಷೀಯ ಚುನಾವಣೆಗೆ ಆಯ್ಕೆಯಾದ ಮೊದಲ ಮಾಜಿ ಅಧ್ಯಕ್ಷರಾಗಿ ಅವರು ಹೊರಹೊಮ್ಮಿದ್ದಾರೆ.

ಕಮಲಾ ಹ್ಯಾರಿಸ್ ಅವರ ಔಪಚಾರಿಕ ಆಯ್ಕೆ ಆಗಸ್ಟ್ 2024 ರಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ನಡೆಯಿತು. ಒಂದು ವೇಳೆ ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರು ಗೆಲುವು ಕಂಡಿದ್ದರೆ, ಅವರು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರದ ಅಧ್ಯಕ್ಷೆಯಾಗಿ ಅಧಿಕಾರ ಪಡೆದ ಮೊದಲ ಕಪ್ಪು ಮತ್ತು ಏಷ್ಯನ್ ಮೂಲದ ಮೊದಲ ಮಹಿಳೆಯಾಗುತ್ತಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...