Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...