Homeಕರ್ನಾಟಕಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ 'ಚಹರೆಗಳೆಂದರೆ ಗಾಯಗಳೂ ಹೌದು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಗೌರಿ ಮೀಡಿಯಾ ಟ್ರಸ್ಟ್‌ ಪ್ರಕಟಿತ ‘ಚಹರೆಗಳೆಂದರೆ ಗಾಯಗಳೂ ಹೌದು’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

- Advertisement -
- Advertisement -

ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಸ್‌. ಪ್ರಭಾಕರ್ ಅವರ ‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನ ಕುರಿತ ಕಥನಗಳ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಣೆಯ ಈ ಕೃತಿಗೆ ಸಂಶೋಧನಾ ವಿಭಾಗದಲ್ಲಿ  ಪ್ರಶಸ್ತಿ ಘೋಷಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘ಚಹರೆಗಳೆಂದರೆ ಗಾಯಗಳೂ ಹೌದು’ ಸಮುದಾಯ ಅಧ್ಯಯನಗಳ ಕುರಿತ ಕಥನಗಳು ಕೃತಿಯು, ವರ್ತಮಾನದಲ್ಲಿ ನಮ್ಮೊಡನೆ ಬದುಕುತ್ತಿರುವ ಬುಡಕಟ್ಟು, ಆದಿವಾಸಿ ಸಮುದಾಯಗಳ ವೈರುಧ್ಯಗಳಿಂದ ಕೂಡಿದ ಸಮಾಜೋ – ಆರ್ಥಿಕ ಬದುಕಿನ ವಾಸ್ತವಗಳೇ ಆಗಿದ್ದರೂ, ನಾಗರೀಕ ಜಗತ್ತಿನ ಚಿಂತನಾಕ್ರಮವಲ್ಲದ ವಾಸ್ತವಿಕ ಸತ್ಯಗಳನ್ನು ಓದುಗರ ಮುಂದಿಡುತ್ತದೆ.

ಪ್ರಶಸ್ತಿಯು 25 ಸಾವಿರ ರೂ.ಗಳ ಬಹುಮಾನ, ಫಲಕ, ಶಾಲು, ಹಾರ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

ತಮ್ಮ ಕೃತಿಗೆ ಪ್ರಶಸ್ತಿ ಘೋಷಣೆಯಾಗಿರುವ ಬಗ್ಗೆ ಮಾತನಾಡಿದ ಪ್ರೊಫೆಸರ್ ಎ.ಎಸ್. ಪ್ರಭಾಕರ, “ಸಮಾಜವಿಜ್ಞಾನದ ಓದು ನನಗೆ ಹೊಸದಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ನಾನು ಭಾಗಿಯಾಗಿದ್ದ ಸಂಘಟನೆಗಳ ಸ್ಟಡಿ ಸರ್ಕಲ್‌ಗಳಲ್ಲಿ ಸಮಾಜ, ರಾಜಕೀಯಾರ್ಥ ಶಾಸ್ತ್ರವನ್ನು ಕಲಿಯುವ ಸಂದರ್ಭಗಳು ಒದಗಿಬಂದಿದ್ದವು. ಅಲ್ಲಿ ಕಲಿತ ಕೆಲವು ಪಾಠಗಳು ಇಲ್ಲಿ ನೆನಪಾಗತೊಡಗಿದವು. ಸರಿಸುಮಾರು ಇನ್ನೂರು ವರ್ಷಗಳ ಕಾಲ ಭಾರತವನ್ನು ತಿರುಗಾಡಿದ ಯುರೋಪ್ ಮತ್ತು ಅಮೆರಿಕದ ವಿದ್ವಾಂಸರು ಭಾರಿ ಗಾತ್ರದ ಅಧ್ಯಯನದ ಸರಕನ್ನು ಇಲ್ಲಿ ಬಿಟ್ಟು ಹೋಗಿರುವುದನ್ನು ನೋಡಿ ಬೆರಗಾದೆ.

ಪಾಶ್ಚಾತ್ಯರಲ್ಲಿ ನಾನು ಆಯ್ಕೆ ಮಾಡಿಕೊಂಡ ವಿದ್ವಾಂಸರನ್ನು ಓದುವುದೇ ಸವಾಲಿನ ಕೆಲಸವಾಗಿತ್ತು. ಕನ್ನಡದಲ್ಲಿ ಪಾಶ್ಚಾತ್ಯ ಅಧ್ಯಯನಕಾರರನ್ನು ಮೆಚ್ಚಿ ಬರೆದ ಬರಹಗಳೇ ಜಾಸ್ತಿ. ಅವರು ಕಟ್ಟಿಕೊಟ್ಟ ಪ್ರಮೆಯಗಳನ್ನು ಮತ್ತು ಅಧ್ಯಯನದ ಸೂತ್ರಗಳನ್ನು ಕಣ್ಮುಚ್ಚಿ ಅನುಕರಿಸುವ ಪರಿಪಾಠ ಕನ್ನಡದಲ್ಲಿ ಇಂದಿಗೂ ಮುಂದು ವರೆದಿದೆ. ಕನ್ನಡದಲ್ಲಿ ಅಷ್ಟರಮಟ್ಟಿಗೆ ಈ ಕ್ಲಾಸಿಕಲ್ ಅಧ್ಯಯನಗಳ ವಿಮರ್ಶಾತ್ಮಕ ಓದು ನಡೆದಿಲ್ಲ. ಸಮಾಜವಿಜ್ಞಾನದಲ್ಲಿ ಬರೆಯುವುದು, ಅದರಲ್ಲೂ ಕನ್ನಡದಲ್ಲಿ ಬರೆಯುವುದು ಸವಾಲಿನ ಸಂಗತಿ.” ಎಂದು ಹೇಳಿದರು.

“ಈ ಹಿಂಜರಿಕೆಯಲ್ಲಿಯೇ ಓದು ಬರಹ ಶುರು ಮಾಡಿದ ನನಗೆ ಕನ್ನಡ ವಿಶ್ವವಿದ್ಯಾಲಯದ ಬೇರೆ ಬೇರೆ ವಿಭಾಗಗಳ ಕೆಲ ಹಿರಿಯ ಪ್ರಾಧ್ಯಾಪಕರು ನೆರವಾಗಿದ್ದಾರೆ. ಅವರನ್ನೆಲ್ಲ ಅತ್ಯಂತ ಕೃತಜ್ಞತೆಯಿಂದ ನೆನೆಯುವೆ.
ಬುಡಕಟ್ಟು ಅಧ್ಯಯನ ವಿಭಾಗವನ್ನೂ ಒಳಗೊಂಡಂತೆ, ಬೇರೆ ಬೇರೆ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಕಳೆದ ಇಪ್ಪತ್ನಾಲ್ಕು ವರ್ಷಗಳಲ್ಲಿ ಅಧ್ಯಯನ ವಿಧಾನದ ಕುರಿತು ಪಾಠ ಮಾಡಿದ್ದೇನೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗುವ ಅನೇಕ ವಿಷಯಗಳ ಮೇಲೆ ನಾನು ಬರೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಯ್ತು” ಎಂದು ಹೇಳಿದರು.

ಪ್ರಶಸ್ತಿ ವಿಜೇತ ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...