Homeಮುಖಪುಟಜಾರ್ಖಂಡ್: 30 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಜಾರ್ಖಂಡ್: 30 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

- Advertisement -
- Advertisement -

ಜಾರ್ಖಂಡ್‌ನಲ್ಲಿ ಪಕ್ಷದ ನಾಯಕರ ವಲಸೆಯನ್ನು ತಡೆಯಲು ಬಿಜೆಪಿ ಕೈಗೊಂಡ ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ನಡುವೆಯು, ಪಕ್ಷದ ವಿರುದ್ಧವಾಗಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದ 30 ಬಂಡಾಯ ನಾಯಕರನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಪ್ರದೀಪ್ ವರ್ಮಾ ಅವರು ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಬಿಜೆಪಿ ಘೋಷಿಸಿದ 35 ಕ್ಕೂ ಹೆಚ್ಚು ಅಭ್ಯರ್ಥಿಗಳು ಬೇರೆ ಪಕ್ಷದಿಂದ ಬಂದ ನಾಯಕರಾಗಿದ್ದು, ಇದು ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿತ್ತು. “ಅವರ ವಿಶ್ವಾಸಾರ್ಹತೆಯ ಬಗ್ಗೆ ಪಕ್ಷದೊಳಗೆ ಅನುಮಾನವುದೆ. ಅವರಲ್ಲಿ ಹಲವರು ಪಕ್ಷವನ್ನು ತೊರೆದು ಜೆಎಂಎಂ ಅಥವಾ ಕಾಂಗ್ರೆಸ್‌ಗೆ ಸೇರಲು ಬಯಸುತ್ತಿದ್ದಾರೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಈ ಬಿಕ್ಕಟ್ಟನ್ನು ನಿರ್ವಹಿಸಲು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ರಾಂಚಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಅತೃಪ್ತ ನಾಯಕರೊಂದಿಗೆ ಸಾಧ್ಯವಾದಷ್ಟು ಮತ್ತೆ ಸಂಪರ್ಕ ಸಾಧಿಸಲು ಮತ್ತು ಸಕಾರಾತ್ಮಕ ವಾತಾವರಣವನ್ನು ಬೆಳೆಸಲು ಅವರು ಪಕ್ಷದ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಘೋಷಣೆಯ ನಂತರ ಮತ್ತಷ್ಟು ರಾಜೀನಾಮೆಗಳನ್ನು ತಡೆಯಲು ಸಂತೋಷ್ ಒತ್ತು ನೀಡಿದ್ದಾರೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆಡಳಿತಾರೂಢ ಇಂಡಿಯಾ ಮೈತ್ರಿಕೂಟವು ‘ಒಂದು ಮತ, ಏಳು ಗ್ಯಾರಂಟಿ’ ಎಂಬ 7 ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. ಈ ಗ್ಯಾರೆಂಟಿಗಳಲ್ಲಿ ಪ್ರತ್ಯೇಕ ಹಿಂದುಳಿದ ವರ್ಗ ಕಲ್ಯಾಣ ಸಚಿವಾಲಯದ ಭರವಸೆ ನೀಡಿದೆ. ಬುಡಕಟ್ಟು ಜನಾಂಗದವರನ್ನು ಓಲೈಸಲು ಖತಿಯಾನ್ ಆಧಾರಿತ ನಿವಾಸ ನೀತಿಯನ್ನು ಪರಿಚಯಿಸಲಾಗಿದೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...