Homeಮುಖಪುಟಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

ಕೃಷಿ ತ್ಯಾಜ್ಯ ಸುಡುವ ರೈತರಿಗೆ ದಂಡ ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ರಾಜಧಾನಿ ದೆಹಲಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಹಿನ್ನಲೆ, ಕೃಷಿ ತ್ಯಾಜ್ಯಗಳನ್ನು ಸುಡುವ ರೈತರಿಗೆ ವಿಧಿಸುವ ದಂಡವನ್ನು ಕೇಂದ್ರ ಸರ್ಕಾರ ಗುರುವಾರ ದ್ವಿಗುಣಗೊಳಿಸಿದೆ. “ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ರೈತರು 30,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ” ಎಂದು ಬುಧವಾರ ಕೇಂದ್ರ ಸರ್ಕಾರ ಪ್ರಕಟಿಸಿದ ಅಧಿಸೂಚನೆ ಹೇಳಿದೆ. ಕೃಷಿ ತ್ಯಾಜ್ಯ

ಅಧಿಸೂಚಣೆಯಲ್ಲಿ, ಎರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು 5,000 ರೂಪಾಯಿಗಳ ಪರಿಸರ ಪರಿಹಾರವನ್ನು ಪಾವತಿಸಬೇಕಾಗುತ್ತದೆ. ಈ ಹಿಂದೆ ಈ ವರ್ಗದ ರೈತರು 2500 ರೂ. ದಂಡ ಪಾವತಿಸಬೇಕಾಗಿತ್ತು. ಎರಡರಿಂದ ಐದು ಎಕರೆ ಜಮೀನು ಹೊಂದಿರುವ ರೈತರು ಹಿಂದೆ 5 ಸಾವಿರ ದಂಡ ಪಾವತಿಸಬೇಕಾಗಿತ್ತು, ಆದರೆ ಇಂದಿನಿಂದ ಅದರ ದಂಡ 10 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಕೃಷಿ ತ್ಯಾಜ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ತ್ಯಾಜ್ಯಗಳನ್ನು ಸುಡುವ ಘಟನೆಗಳ ಸಂಖ್ಯೆಯು ಹೆಚ್ಚಾದರೆ ನವೆಂಬರ್ 1 ರಿಂದ 15 ರವರೆಗೆ ದೆಹಲಿಯು ಗರಿಷ್ಠ ಮಟ್ಟದ ಮಾಲಿನ್ಯವನ್ನು ಅನುಭವಿಸುತ್ತದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ವಿಶ್ಲೇಷಣೆ ಹೇಳಿದೆ.

ಭತ್ತ-ಗೋಧಿ ಬೆಳೆ ಪದ್ಧತಿ, ದೀರ್ಘಾವಧಿಯ ಭತ್ತದ ತಳಿಗಳ ಬೇಸಾಯ, ಯಾಂತ್ರೀಕೃತ ಕೊಯ್ಲು, ಹೊಲದಲ್ಲಿ ಬೆಳೆದಿರುವ ಕೊಯ್ಲು, ಕಾರ್ಮಿಕರ ಕೊರತೆ, ಮತ್ತು ಕೃಷಿ ತ್ಯಾಜ್ಯಕ್ಕೆ ಮಾರುಕಟ್ಟೆಯ ಕೊರತೆ ಮುಂತಾದ ಸಮಸ್ಯೆಗಳ ಕಾರಣಕ್ಕೆ ಅದನ್ನು ಸುಡುಡಕಲಾಗುತ್ತದೆ ಎನ್ನಲಾಗಿದೆ.

ಈ ಅವಶೇಷಗಳನ್ನು ಹೆಚ್ಚಾಗಿ ಸುಡುವ ಅವಧಿಯಲ್ಲಿ, ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗುವ ವಾಯು ಮಾಲಿನ್ಯಕ್ಕೆ 30% ದಷ್ಟು ಕೊಡುಗೆ ನೀಡುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಅದಾಗ್ಯೂ ಈ ವಾದವನ್ನು ಪರಿಸರ ತಜ್ಞರು ಅಲ್ಲಗೆಳೆದಿದ್ದು, ಹಿರಿಯ ಪರಿಸರವಾದಿ ಸುನೀತಾ ನಾರಾಯಣ್ ಅವರು, “ಚಳಿಗಾಲದ ಸಮಯ ರೈತರು ಕೃಷಿ ತ್ಯಾಜ್ಯವನ್ನು ವ್ಯಾಪಕವಾಗಿ ಸುಡುವುದಕ್ಕೆ ಮಾತ್ರ ದೆಹಲಿಯಲ್ಲಿ ವಾಯು ಮಾಲಿನ್ಯ ಆಗುತ್ತಿಲ್ಲ. ಬದಲಾಗಿ, ದೆಹಲಿಯ ಸಾರಿಗೆ ಮತ್ತು ಕೈಗಾರಿಕೆಗಳು ಸೇರಿದಂತೆ ನಗರದೊಳಗಿನ ನಿರಂತರ ಮಾಲಿನ್ಯದ ಕಾರಣಕ್ಕೆ ಇದು ನಡೆಯುತ್ತದೆ” ಎಂದು ಹೇಳುತ್ತಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಐದು ಗ್ಯಾರಂಟಿಗಳನ್ನು ಘೋಷಿಸಿದ ಪ್ರತಿಪಕ್ಷಗಳ ಒಕ್ಕೂಟ ಎಂವಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...