Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...