Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...