Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...