Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...