Homeದಲಿತ್ ಫೈಲ್ಸ್ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

- Advertisement -
- Advertisement -

ಹರಿಯಾಣದ ಸಾರ್ವಜನಿಕ ಆರೋಗ್ಯ ಇಲಾಖೆಯ ದಲಿತ ಗುತ್ತಿಗೆ ಕಾರ್ಮಿಕರೊಬ್ಬರನ್ನು ರಾಜ್ಯ ನಾಗರಿಕ ಸೇವಾ ಅಧಿಕಾರಿಯೊಬ್ಬರು ಗನ್‌ಪಾಯಿಂಟ್‌ನಲ್ಲಿ ಇಟ್ಟು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ವರದಿಯಾಗಿದ್ದು, ಗುರುವಾರ ಪೊಲೀಸರು ದೂರುದಾರರನ್ನು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿದ್ದಾರೆ. ಹರಿಯಾಣ

ಈ ನಡುವೆ ಜಿಲ್ಲೆಯೊಂದರಲ್ಲಿ ನಿಯೋಜಿಸಲಾದ ಹರಿಯಾಣ ನಾಗರಿಕ ಸೇವೆಗಳ (ಎಚ್‌ಸಿಎಸ್) ಅಧಿಕಾರಿಯನ್ನು ರಾಜ್ಯ ಸರ್ಕಾರ ಗುರುವಾರ ಸಂಜೆ ಅಮಾನತುಗೊಳಿಸಿದೆ. ಅದಾಗ್ಯೂ, ಅವರ ಅಮಾನತು ಆದೇಶದಲ್ಲಿ ಯಾವುದೇ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಅಧಿಕಾರಿಯು ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತ ದಲಿತ ವ್ಯಕ್ತಿ ಆರೋಪಿಸಿದ್ದಾರೆ. ಸಂತ್ರಸ್ತ ವ್ಯಕ್ತಿಯು ಅಂಚೆ ಮೂಲಕ ದೂರನ್ನು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆ ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅವರು ಆರೋಪಿಸಿದ್ದು, ತನ್ನ ದೂರಿನ ಪ್ರತಿಯನ್ನು ಪೊಲೀಸರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿರುವುದಾಗಿ ಹೇಳಿದ್ದಾರೆ.

ಎಚ್‌ಸಿಎಸ್ ಅಧಿಕಾರಿ ತನ್ನನ್ನು ಗುತ್ತಿಗೆ ಆಧಾರದ ಮೇಲೆ ಪ್ಯೂನ್ ಆಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಹೇಳಿಕೊಂಡ ಸಂತ್ರಸ್ತ ವ್ಯಕ್ತಿ ಹೇಳಿಕೊಂಡಿದ್ದಾರೆ. ಹರಿಯಾಣ

“ಅವರು ತಮ್ಮ ಅಧಿಕೃತ ನಿವಾಸದಲ್ಲಿ ಮಸಾಜ್‌ಗಾಗಿ ನನ್ನನ್ನು ಕರೆಯುತ್ತಿದ್ದರು. ಅವರು ತಪ್ಪು ಕೆಲಸ ಮಾಡಲು ಪ್ರಾರಂಭಿಸಿದಾಗ, ಅದಕ್ಕೆ ಹಲವಾರು ಬಾರಿ ನಾನು ನಿರಾಕರಿಸಿದ್ದೆ. ಆದರೆ ಅವರು ಪಿಸ್ತೂಲ್ ಹಿಡಿದು ಬೆದರಿಸಿ ನನ್ನನ್ನು ಕೆಲಸದಿಂದ ತೆಗೆದುಹಾಕುವುದಾಗಿ ಹೇಳಿದ್ದರು. ಅದರ ನಂತರ, ನಾನು ಸಾಕ್ಷ್ಯವನ್ನು ಸಂಗ್ರಹಿಸಲು ಈ ಶೋಷಣೆಯ ವೀಡಿಯೊವನ್ನು ಚಿತ್ರೀಕರಿಸಿದ್ದೇನೆ” ಎಂದು ಸಂತ್ರಸ್ತ ದಲಿತ ವ್ಯಕ್ತಿ ಹೇಳಿದ್ದಾರೆ.

“ಅದರ ನಂತರ ನಾನು ಅಲ್ಲಿಗೆ ಹೋಗುವುದನ್ನು ನಿಲ್ಲಿಸಿದೆ. ನಾನು ಸಾಯಲು ಅಥವಾ ಅವರ ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದೆ. ನಾನು ಹೃದ್ರೋಗ ರೋಗಿಯಾಗಿದ್ದು, ಈ ಶೋಷಣೆ ಕಳೆದ ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಸಂತ್ರಸ್ತ ವ್ಯಕ್ತಿಯಿಂದ ಅಂಚೆ ಮೂಲಕ ದೂರು ಸ್ವೀಕರಿಸಿದ್ದೇವೆ ಎಂದು ಹಿಸಾರ್‌ನ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ ಸಾವನ್ ಗುರುವಾರ ಹೇಳಿದ್ದಾರೆ. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನಾವು ಅವರನ್ನು ಕರೆಸಿದ್ದೇವೆ ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

‘ಪುರುಷರು ಮಹಿಳೆಯರ ಬಟ್ಟೆ ಹೊಲಿಯುವುದು, ಕೂದಲು ಕತ್ತರಿಸುವುದು ಮಾಡಬಾರದು..’; ಯುಪಿ ಮಹಿಳಾ ಆಯೋಗದಿಂದ ವಿಚಿತ್ರ ಪ್ರಸ್ತಾಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...