Homeಕರ್ನಾಟಕಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

- Advertisement -
- Advertisement -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ (ನ.7) ಅನುಮತಿ ನೀಡಿದೆ.

ಪರಸ್ಪರ ರಾಜಿ ಸಂಧಾನ ಅಥವಾ ಮಾತುಕತೆಯ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಅವರಿಗೆ ನ್ಯಾಯಾಲಯ ಸಮಯಾವಕಾಶ ನೀಡಿತ್ತು. ಆದರೆ, ದೂರು ದಾಖಲಿಸಿರುವ ರೋಹಿಣಿ ಸಿಂಧೂರಿ ರಾಜಿ ಇತ್ಯರ್ಥಕ್ಕೆ ಒಪ್ಪಿಲ್ಲ.

ಆದ್ದರಿಂದ, ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಅರ್ಜಿ ವಾಪಸ್‌ ಪಡೆಯಲು ರೂಪಾ ಅವರಿಗೆ ಅನುಮತಿಸಿದೆ.

ಮೌದ್ಗಿಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಇಬ್ಬರ ನಡುವಿನ ವಿವಾದವನ್ನು ಬಗೆಹರಿಸಲು ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಸಿಂಧೂರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ‘ತಮ್ಮ ಕಕ್ಷಿದಾರೆಯ ಘನತೆಗೆ ಅಪಾರ ಹಾನಿಯಾಗಿದೆ’ ಎಂದಿದ್ದಾರೆ.

ರೋಹಿಣಿ ಸಿಂಧೂರಿ ಅವರ ಕುಟುಂಬದ ವರ್ಚಸ್ಸಿಗೆ ಧಕ್ಕೆ ತರಲಾಗಿದೆ. ರೋಹಿಣಿ ಅವರಿಗೆ ಸಂಬಂಧಿಸಿದ ಖಾಸಗಿ ವಿಚಾರಗಳನ್ನು ಬಹಿರಂಗಪಡಿಸಲಾಗಿದೆ. ಆ ಮಾಹಿತಿ ಇನ್ನೂ ಸಾರ್ವಜನಿಕವಾಗಿ ಲಭ್ಯವಿದೆ. ರಾಜಿಸೂತ್ರದ ಪ್ರಸ್ತಾಪ ಬೇಡ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದ ಸಿಂಧೂರಿ, ತನಗೆ ರಾಜಿ ಸಂಧಾನದಲ್ಲಿ ಆಸಕ್ತಿ ಇಲ್ಲ. ಅರ್ಹತೆಯ ಆಧಾರದ ಮೇಲೆ ಪ್ರಕರಣ ನಿರ್ಧರಿಸಬೇಕು ಎಂದು ಕೋರಿದ್ದಾರೆ.

ವಿಚಾರಣೆ ವೇಳೆ, ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಆರೋಪದ ಹಿಂದಿನ ಉದ್ದೇಶವಾದರೂ ಏನು? ಎಂದು ರೂಪಾ ಅವರನ್ನು ನ್ಯಾಯಾಲಯ ಪ್ರಶ್ನಿಸಿದೆ. ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ರೂಪಾ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಯೇ? ಸಂಬಂಧವಿಲ್ಲದ ಹೇಳಿಕೆ ನೀಡಿದರೆ ಅದು ಮಾನಹಾನಿಕರವಲ್ಲವೇ ಎಂದು ಕೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿದ ರೂಪಾ ಪರ ವಕೀಲ ಆದಿತ್ಯ ಸೋಂಧಿ, ಸಿಂಧೂರಿ ಅವರ ಕರ್ತವ್ಯಲೋಪಗಳ ಕುರಿತು ರೂಪಾ ಗಮನ ಸೆಳೆದಿದ್ದಾರೆ ಎಂದು ಸಮಜಾಯಿಸಿ ನೀಡಿದ್ದಾರೆ. ಇದನ್ನು ಒಪ್ಪಿಕೊಳ್ಳದ ನ್ಯಾ. ಅಮಾನುಲ್ಲಾ ಅವರು, ಇಲಾಖೆ ವ್ಯಾಪ್ತಿಯಲ್ಲೇ ರೂಪಾ ದೂರು ನೀಡಬಹುದಿತ್ತು. ಪರಸ್ಪರ ಮುಗಿಬೀಳಲು ಹೊರಟಿದ್ದಾರೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಪ್ರತಿಯೊಂದು ಅಂಶವೂ ನಿಮಗೆ ತಿಳಿದಿದೆ ಅಲ್ಲವೇ? ಆದರೂ ನೀವು ಇದನ್ನು ಮಾಡಿದ್ದೀರಿ ಎಂದು ಹೇಳಿದ್ದಾರೆ.

ನ್ಯಾಯಾಲಯ ಸಮಯಾವಕಾಶ ನೀಡಿದರೂ, ಇಬ್ಬರ ನಡುವೆ ಯಾವುದೇ ಇತ್ಯರ್ಥಕ್ಕೆ ಬರಲು ಸಾಧ್ಯವಾಗದ ಕಾರಣ, ಮೊಕದ್ದಮೆ ರದ್ದುಪಡಿಸುವಂತೆ ಕೋರಿದ್ದ ಅರ್ಜಿ ಹಿಂಪಡೆಯುವುದಾಗಿ ರೂಪಾ ಪರ ವಕೀಲ ಸೋಂಧಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಕ್ಕೆ ಒಪ್ಪಿದ ನ್ಯಾಯಾಲಯ ರೂಪಾ ಮೌದ್ಗಿಲ್ ಅವರಿಗೆ ಮನವಿ ಹಿಂಪಡೆಯಲು ಅನುಮತಿ ನೀಡಿದೆ.

ಇದನ್ನೂ ಓದಿ : ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...