Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...