Homeಕರ್ನಾಟಕಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

ಶುರುವಾಗಿಯೇಬಿಟ್ಟಿತಾ ಬಿಜೆಪಿ-ಜೆಡಿಎಸ್ ಮೈತ್ರಿ?

- Advertisement -
- Advertisement -

| ನೀಲಗಾರ |

ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿಲ್ಲ ಎಂಬುದೊಂದು ಬಿಟ್ಟರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬುದರಲ್ಲಿ ಯಾವ ಸಂದೇಹವೂ ಉಳಿದಿಲ್ಲ. ದೋಸೆ ಮಗುಚಿದ ಹಾಗೆ ಜೆಡಿಎಸ್ ಬಹುಬೇಗ ಮೈತ್ರಿ ಬದಲಿಸಲು ಸಾಧ್ಯ ಎಂಬ ಬಗ್ಗೆ ಯಾರಿಗೇನೂ ಡೌಟು ಇಲ್ಲವಾದರೂ, ಇಷ್ಟು ಬೇಗ ಅದಕ್ಕೆ ಸಂದರ್ಭ ಒದಗಿ ಬಂದುಬಿಡುತ್ತದೆ ಎಂದುಕೊಂಡಿರಲಿಲ್ಲ. ಬಿಜೆಪಿಗೆ ಉಪಚುನಾವಣೆಯಲ್ಲಿ ಬಹುಮತ ಪಡೆಯುವಷ್ಟು ಸೀಟುಗಳು ಬರುವ ಕುರಿತು ಅನುಮಾನ ಉಂಟಾಗುತ್ತಿದ್ದ ಹಾಗೇ, ‘ಈ ಸರ್ಕಾರ ಉರುಳಲು ಬಿಡುವುದಿಲ್ಲ’ ಎಂದು ಕುಮಾರಸ್ವಾಮಿಯವರು ಸ್ಪಷ್ಟಪಡಿಸಿಬಿಟ್ಟಿದ್ದಾರೆ. ಅಷ್ಟೇ ವೇಗವಾಗಿ ಯಡಿಯೂರಪ್ಪನವರು ಧನ್ಯವಾದಗಳನ್ನೂ ಅರ್ಪಿಸಿಬಿಟ್ಟಿದ್ದಾರೆ.

ಮುಖ್ಯವಾಗಿ ನಾಲ್ಕು ಅಂಶಗಳು ಅದನ್ನು ಸಾಧ್ಯವಾಗಿಸುತ್ತಿವೆ.

1. ಡಿಕೆಶಿ ಫ್ಯಾಕ್ಟರ್: ಡಿಕೆ ಶಿವಕುಮಾರ್‍ರನ್ನು ಅಪ್ಪಿಕೊಳ್ಳುವ ಮೂಲಕ ಜಾತಿ ಸಮೀಕರಣದ ಅನುಕೂಲವನ್ನು ಗೌಡರ ಕುಟುಂಬ ಪಡೆದುಕೊಳ್ಳುತ್ತಿದೆಯಾದರೂ, ಡಿಕೆಶಿಗಾಗಿದ್ದು ತಮಗೂ ಮೆಸೇಜ್ ಎಂಬುದು ಅವರಿಗೆ ಗೊತ್ತಿದೆ. ಅದೇರೀತಿ ಚಿದಂಬರಂ ಮತ್ತಿತರರು ಜೈಲುಪಾಲಾಗಿ ಹೊರಬರದೇ ಇರುವುದು ಸಿಬಿಐನಲ್ಲೂ ಕೇಸುಗಳನ್ನು ಎದುರಿಸುತ್ತಿರುವ ಎಚ್‍ಡಿಕೆಗೆ ಆತಂಕ ಹುಟ್ಟಿಸಿದೆ.

2. ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸೀಟುಗಳು ಬಂದರೂ, ಬಾರದೇ ಇದ್ದರೂ ಆಪರೇಷನ್ ಕಮಲದ ಮುಂದಿನ ಟಾರ್ಗೆಟ್ ಜೆಡಿಎಸ್ ಎಂಎಲ್‍ಎಗಳೇ ಆಗಿರುತ್ತಾರೆಂಬುದರಲ್ಲಿ ಅನುಮಾನವಿಲ್ಲ. ಈಗಾಗಲೇ ಜಿ.ಟಿ.ದೇವೇಗೌಡರು ಒಂದು ಕಾಲು ಹೊರಗಿಟ್ಟಿರುವುದನ್ನು ಘೋಷಿಸಿಯೂ ಆಗಿದೆ. ಹಾಗಾಗಿ ಜೆಡಿಎಸ್‍ಅನ್ನು ದುರ್ಬಲಗೊಳಿಸಿಕೊಳ್ಳುತ್ತಾ ಹೋಗುವುದಕ್ಕಿಂತ ಅಧಿಕಾರ ಹಂಚಿಕೆ ಅಥವಾ ಅಧಿಕಾರಸ್ಥರ ಸಖ್ಯದೊಂದಿಗೆ ಎಂಎಲ್‍ಎಗಳನ್ನು ಮತ್ತು ಪಕ್ಷವನ್ನು ಉಳಿಸಿಕೊಳ್ಳುವುದು ಜೆಡಿಎಸ್‍ಗೆ ಅನಿವಾರ್ಯ.

3. ಒಂದುವೇಳೆ ಬಿಜೆಪಿಗೆ ಬಹುಮತಕ್ಕೆ ಬೇಕಿರುವಷ್ಟು ಎಂಎಲ್‍ಎಗಳು ಗೆಲ್ಲದಿದ್ದರೆ ಯಡಿಯೂರಪ್ಪನವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಇಳಿಸಬಹುದಾದರೂ, ತಾವೇ ಸರ್ಕಾರ ರಚನೆ ಮಾಡುವುದು ಸಾಧ್ಯವಿಲ್ಲ. ಯಾರು ಒಪ್ಪಿದರೂ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಒಪ್ಪುವುದಿಲ್ಲವಾದ್ದರಿಂದ ಮತ್ತೆ ಚುನಾವಣೆಗೇ ಹೋಗಬೇಕು. ಅದಕ್ಕೆ ಬಿಜೆಪಿಗಿರುವ ಸಿದ್ಧತೆಯೂ ಜೆಡಿಎಸ್‍ಗಿಲ್ಲ.

4. ಫೀಲ್ಡ್‍ನಲ್ಲಿ ಜೆಡಿಎಸ್‍ಗೆ ಎದುರಾಳಿ ಕಾಂಗ್ರೆಸ್ಸೇ ಹೊರತು ಬಿಜೆಪಿಯಲ್ಲ. ಒಂದುವೇಳೆ ಮೈತ್ರಿ ಮುಂದುವರೆದರೆ ದಕ್ಷಿಣ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಕಾಂಗ್ರೆಸ್ ವರ್ಸಸ್ ಬಿಜೆಪಿ ಎಂದಾಗಿಬಿಟ್ಟರೆ ಜೆಡಿಎಸ್ ಅಪ್ರಸ್ತುತವಾಗಿಬಿಡುತ್ತದೆ.

ಇವೆಲ್ಲಾ ಕಾರಣಗಳಿಂದ ಜೆಡಿಎಸ್ ಮತ್ತು ಬಿಜೆಪಿಯ ನಡುವೆ ಮೈತ್ರಿ ಏರ್ಪಟ್ಟಿದೆ. ಇನ್ನು ಜಾತ್ಯತೀತತೆ, ಸಿದ್ಧಾಂತ ಎಂಬುದಕ್ಕೂ ಕುಮಾರಸ್ವಾಮಿಯವರಿಗೂ ಯಾವ ಸಂಬಂಧವೂ ಇಲ್ಲ. ಹೀಗಾಗಿ ಒಂದು ರೀತಿಯಲ್ಲಿ ಇದು ಸಹಜ ಬೆಳವಣಿಗೆಯಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಾಯಿಗೆಬಂದಂತೆ ಬಯ್ಯುತ್ತಿದ್ದ ಜೆಜೆಪಿ ಪಕ್ಷದ ಚೌತಾಲಾ ಅವರ ಜೊತೆಯೇ ಚುನಾವಣೋತ್ತರ ಮೈತ್ರಿಗೆ ಮುಂದಾದರು. ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲಿನಲ್ಲಿದ್ದ ಆತನ ತಂದೆ ಮತ್ತು ತಾತ ಪೆರೋಲ್ ಮೇಲೆ ಹೊರಬಂದು ಪ್ರಮಾಣವಚನ ಸಮಾರಂಭಕ್ಕೆ ಹಾಜರಾದರು. ಇದರ ಬಗ್ಗೆ ಬಿಜೆಪಿಗೂ ಯಾವ ನಾಚಿಕೆಯಿರಲಿಲ್ಲ. ಭ್ರಷ್ಟಾಚಾರದ ವಿರುದ್ಧ ಮೋದಿ ಮತ್ತು ಶಾ ಈಗಲೂ ವೀರಾವೇಶದ ಭಾಷಣಗಳನ್ನೂ ಮಾಡಬಹುದು. ಆದರೆ, ಇಂಥದ್ದಕ್ಕೇನೂ ಅಡ್ಡಿಯಾಗುವುದಿಲ್ಲ.

ಕರ್ನಾಟಕದಲ್ಲಿ ಗಣಿ ಕೇಸುಗಳಲ್ಲಿ ಜೈಲಿಗೆ ಹೋಗಿಬಂದ ಬಿಜೆಪಿ ಶಾಸಕರನ್ನು ಆಲಂಗಿಸಿಕೊಂಡ ಕಾಂಗ್ರೆಸ್ಸಿಗೂ ಯಾವ ನೈತಿಕತೆಯಿಲ್ಲ. ಈಗ ಅದೇ ಶಾಸಕರು ಮರಳಿ ಬಿಜೆಪಿಗೇ ಹೋಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್‍ಗೆ ಬಿಜೆಪಿ ಜೊತೆ ಸೇರುವುದರಿಂದ ನೈತಿಕ ಪ್ರಶ್ನೆಗಳೇಳುವ ಸಾಧ್ಯತೆಯೇ ಇಲ್ಲ.

ಹಾಗಾಗಿ ಇನ್ನೊಂದು ನಿರ್ಲಜ್ಜ ಮೈತ್ರಿಯನ್ನು ನೋಡಲು ಕರ್ನಾಟಕವು ಸಿದ್ಧವಾಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...