Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...