Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...