Homeಮುಖಪುಟಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ - ರಾಹುಲ್ ಗಾಂಧಿ

ಬುಡಕಟ್ಟು ಹಕ್ಕುಗಳ ಬಗ್ಗೆ ಮಾತನಾಡಿದರೆ ದೇಶ ಒಡೆಯುತ್ತದೆ ಎಂದು ಬಿಜೆಪಿ ಹೇಳುತ್ತದೆ – ರಾಹುಲ್ ಗಾಂಧಿ

- Advertisement -
- Advertisement -

ಬುಡಕಟ್ಟು ಹಕ್ಕುಗಳ ಬಗ್ಗೆ ನಾನು ಮಾತನಾಡಿದಾಗೆಲ್ಲಾ ನಾನು ದೇಶವನ್ನು ವಿಭಜಿಸುತ್ತಿದ್ದೇನೆ ಎಂದು ಬಿಜೆಪಿ ಆರೋಪಿಸುತ್ತದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಬುಡಕಟ್ಟು ಪ್ರಾಬಲ್ಯದ ಜಾರ್ಖಂಡ್‌ನ ಗುಮ್ಲಾ ಮತ್ತು ಲೋಹರ್ಡಗಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಟಿ, ಎಸ್‌ಸಿ ಮತ್ತು ಒಬಿಸಿ ಮೀಸಲಾತಿಯನ್ನು ಕ್ರಮವಾಗಿ 28%, 12% ಮತ್ತು 27%ಕ್ಕೆ ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಬುಡಕಟ್ಟು ಹಕ್ಕುಗಳ

ಆದಿವಾಸಿಗಳು ಎಂದರೆ ಈ ನೆಲದ ಮೊದಲ ಮಾಲೀಕರು, ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಮೊದಲ ಹಕ್ಕು ಹೊಂದಿರುವರು. ಆದರೆ ಬಿಜೆಪಿಯವರು ಅವರನ್ನು ವನವಾಸಿ ಎಂದು ಕರೆಯುತ್ತದೆ. ಅಂದರೆ ಕಾಡಿನಲ್ಲಿ ವಾಸಿಸುವ ಮತ್ತು ಈ ದೇಶದ ಜಲ, ಕಾಡು ಮತ್ತು ಜಮೀನಿನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ಪ್ರತಿಪಾದಿಸಲು ಅವರು ಹಾಗೆ ಕರೆಯುತ್ತಾರೆ ಎಂದು ಆದಿವಾಸಿಗಳು ಎಂಬ ಪದದ ಅರ್ಥವನ್ನು ವಿವರಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಿಮ್ಮನ್ನು ವನವಾಸಿ ಎಂದು ಕರೆಯುವವರು, ನಿಮ್ಮ ಬಳಿ ಏನಿದ್ದರೂ ಕಸಿದುಕೊಳ್ಳಲು ಬಯಸುತ್ತಾರೆ. ಮೋದಿ ಅವರು ಇಲ್ಲಿಗೆ ಬಂದು ನಿಮ್ಮನ್ನು ವನವಾಸಿ ಎಂದು ಹೇಳುತ್ತಾರೆ. ಅಂದರೆ ನೀವು ಕಾಡಿನಲ್ಲಿ ವಾಸಿಸುವವರು ಮಾತ್ರ, ಈ ಕಾಡು ನಮ್ಮದು, ಭೂಮಿ ನಮ್ಮದು ಮತ್ತು ನಿಮ್ಮ ನೀರು ಕೂಡ ನಮ್ಮದು ಎಂಬುವುದು ಅದರ ಅರ್ಥವಾಗಿದೆ. ಇದು ಆದಿವಾಸಿಗಳಿಗೆ ಸೇರಿದ್ದಲ್ಲ, ಮೋದಿ ಅವರಿಗೆ, ಬಂಡವಾಳಶಾಹಿಗಳು ಮತ್ತು ಅದೇ ರೀತಿ ಅದಾನಿಗಳಿಗೂ ಸೇರಿದೆ ಎಂಬುವುದಾಗಿದೆ ಅವರ ವಾದ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದ್ದರಿಂದ, ಅವರು ಎಲ್ಲಿಗೆ ಹೋದರೂ ಅವರು ನಿಮ್ಮ ಭೂಮಿಯನ್ನು ನಿಮ್ಮಿಂದ ಕಸಿದುಕೊಳ್ಳುತ್ತಾರೆ. ಬಿಜೆಪಿ ‘ವಿಕಾಸ’ ಎಂಬ ಹೊಸ ಪದವನ್ನು ಹುಟ್ಟುಹಾಕಿದೆ. ಅದರ ಅರ್ಥ ಆದಿವಾಸಿಗಳ ಭೂಮಿ ಎಲ್ಲಿದ್ದರೂ ಅದನ್ನು ಕಿತ್ತುಕೊಳ್ಳಿ ಎಂಬುದಗಿದ್ದು; ಇದು ಅವರ ವಿಕಾಸ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. ಬುಡಕಟ್ಟು ಹಕ್ಕುಗಳ

“ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಾದರೆ, ಅದನ್ನು ನಿಮ್ಮ ಒಪ್ಪಿಗೆಯೊಂದಿಗೆ ತೆಗೆದುಕೊಳ್ಳಬೇಕು. ಒಂದು ವೇಳೆ ನೀವು ನಿಮ್ಮ ಭೂಮಿಯನ್ನು ನೀಡಿದ್ದರೆ ಅದಕ್ಕೆ ನೀವು ನ್ಯಾಯಯುತ ಪರಿಹಾರವನ್ನು ನೀವು ಪಡೆಯಬೇಕು. ನಿಮ್ಮ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಆ ಕೈಗಾರಿಕೆಗಳು ನಿಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ನಾವು ಬಯಸುತ್ತೇವೆ.” ಎಂದು ರಾಹುಲ್ ಗಾಂಧಿ ಹೇಳಿದದ್ದಾರೆ. ನಿಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಮತ್ತು ವಕೀಲರಾಗಬೇಕು ಮತ್ತು ಕಾರ್ಖಾನೆಯನ್ನು ನಡೆಸುವುದನ್ನು ಕಲಿಯಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

8%ದಷ್ಟು ಬುಡಕಟ್ಟು, 15% ದಲಿತ ಮತ್ತು ಸುಮಾರು 50% ಇತರೆ ಹಿಂದುಳಿದ ಜಾತಿಗಳು (OBC) ಇವೆ. ಅದರಲ್ಲಿ 15%ದಷ್ಟು ಅಲ್ಪಸಂಖ್ಯಾತರನ್ನು ಸೇರಿಸಿ ಒಟ್ಟು ಮಾಡಿದರೆ ಒಟ್ಟು ಜನಸಂಖ್ಯೆಯ 90%ದಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು ನೋಡಿದರೆ, ಈ ಶೇಕಡಾ 90%ದಷ್ಟು ಜನಸಂಖ್ಯೆಗೆ ಸೇರಿದವ ಯಾರನ್ನೂ ಕಂಡುಬರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

“ನಾನು ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದಾಗ, ಅವರು ರಾಹುಲ್ ಗಾಂಧಿ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ 90% ದಷ್ಟು ಜನರಿಗೆ ದೇಶವನ್ನು ನಡೆಸುವುದರಲ್ಲಿ ಯಾವುದೇ ಪಾತ್ರವಿಲ್ಲ. ನಾನು ಅವರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ, ಆದರೆ ದೇಶವನ್ನು ನಡೆಸುವಲ್ಲಿ ಅವರ ಸಹಭಾಗಿತ್ವವನ್ನು ಹೊಂದಿರಬೇಕು ಎಂದು ನಾನು ಹೇಳುತ್ತಿದ್ದೇನೆ. ದೇಶದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳಿವೆ, ಅವುಗಳಲ್ಲಿ ಯಾವುದಾದರೂ ಬುಡಕಟ್ಟು ಜನರ ಒಡೆತನದಲ್ಲಿದ್ದರೆ ಹೆಸರಿಸಿ; ಅಂತಹ ಯಾವುದೇ ಆಸ್ಪತ್ರೆಯ ಕೂಡಾ ಕಾಣುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...