Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...