Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...