Homeಅಂತರಾಷ್ಟ್ರೀಯಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

ಜಗತ್ತಿನ 100 ಕೋಟಿ ಮಕ್ಕಳು ಹಿಂಸೆಯಿಂದ ಬಳಲುತ್ತಿದ್ದಾರೆ: ವಿಶ್ವ ಆರೋಗ್ಯ ಸಂಸ್ಥೆ

- Advertisement -
- Advertisement -

ಸುಮಾರು 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಕಿರುಕುಳ, ಬೆದರಿಸುವಿಕೆ, ದೈಹಿಕ ಅಥವಾ ಭಾವನಾತ್ಮಕ ನಿಂದನೆ, ಲೈಂಗಿಕ ಹಿಂಸೆಯಂತಹ ವಿವಿಧ ರೀತಿಯ ಹಿಂಸೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಹೇಳಿದೆ. ಪ್ರತಿ 13 ನಿಮಿಷಗಳಿಗೊಮ್ಮೆ ಒಂದು ಮಗು ಅಥವಾ ಹದಿಹರೆಯದ ಮಗು ಹತ್ಯೆಗೊಳಗಾಗುತ್ತಾರೆ ಮತ್ತು ಪ್ರತಿ ವರ್ಷ ಸುಮಾರು 40,000 ಮಕ್ಕಳು ತಡೆಗಟ್ಟಬಹುದಾದ ಸಾವುಗಳಿಗೆ ಬಲಿಯಾಗುತ್ತಾರೆ ಎಂದು ಅದು ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಹಿಂಸೆಗೆ ಒಳಗಾಗುವ ಮಕ್ಕಳಲ್ಲಿ ಅರ್ಧದಷ್ಟು ಜನರು ಮಾತ್ರ ತಮ್ಮ ಹಿಂಸೆಯನ್ನು ಹೇಳುತ್ತಾರೆ. ಅದರಲ್ಲಿ ಕೇವಲ 10% ಮಾತ್ರ ಯಾವುದಾದರೂ ಸಹಾಯ ಪಡೆಯುತ್ತಾರೆ ಎಂದು ವರದಿ ಉಲ್ಲೇಖಿಸಿದೆ. ಪ್ರತಿ 10 ಮಕ್ಕಳಲ್ಲಿ 9 ಮಕ್ಕಳು ಇನ್ನೂ ದೈಹಿಕ ಶಿಕ್ಷೆ ಮತ್ತು ಲೈಂಗಿಕ ದೌರ್ಜನ್ಯದಂತಹ ಬಾಲ್ಯದ ಹಿಂಸೆಯನ್ನು ನಿಷೇಧಿಸದ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2ರಿಂದ 17ರ ವರೆಗಿನ ವರ್ಷದ ಮಕ್ಕಳಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ಅಂದರೆ 100 ಕೋಟಿಗಿಂತಲೂ ಹೆಚ್ಚು ಮಕ್ಕಳು ಪ್ರತಿ ವರ್ಷ ಕೆಲವು ರೀತಿಯ ಹಿಂಸೆಯನ್ನು ಅನುಭವಿಸುತ್ತಾರೆ. ಈ ಹಿಂಸೆ ಆತಂಕ, ಖಿನ್ನತೆ, ಅಸುರಕ್ಷಿತ ಲೈಂಗಿಕತೆ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಂತಹ ಅಪಾಯಕಾರಿ ನಡವಳಿಕೆಗಳಿಗೆ ಕೊಡುಗೆ ನೀಡುತ್ತದೆ ಜೊತೆಗೆ ಮಕ್ಕಳಲ್ಲಿ ಶೈಕ್ಷಣಿಕ ಸಾಧನೆಯನ್ನು ಕಡಿಮೆ ಮಾಡುತ್ತದೆ ಎಂದು ವರದಿ ಹೇಳಿದೆ.

ದೈಹಿಕ ಶಿಕ್ಷೆ ಸೇರಿದಂತೆ ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ 100 ಕ್ಕೂ ಹೆಚ್ಚು ಸರ್ಕಾರಗಳು ಮಕ್ಕಳ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸಲು ಕೊಲಂಬಿಯಾದ ಬೊಗೋಟಾದಲ್ಲಿ ಗುರುವಾರ ನಡೆದ ಮಹತ್ವದ ಕಾರ್ಯಕ್ರಮದಲ್ಲಿ ಐತಿಹಾಸಿಕ ಒಪ್ಪಂದಗಳನ್ನು ಮಾಡಿವೆ.

“ತಡೆಗಟ್ಟಲು ಸಾಧ್ಯವಿರುವ ಹೊರತಾಗಿಯೂ, ಪ್ರಪಂಚದಾದ್ಯಂತದ ಲಕ್ಷಾಂತರ ಮಕ್ಕಳಿಗೆ ಭಯಾನಕ ಹಿಂಸೆ ಎಂಬುವುದು ದೈನಂದಿನ ವಾಸ್ತವವಾಗಿ ಪರಿಣಮಿಸಿದೆ. ತಲೆಮಾರುಗಳಿಂದ ದಾಟಿ ಬರುತ್ತಿರುವ ಇದನ್ನು, ಸರ್ಕಾರಗಳು ನಿರ್ಣಾಯಕವಾಗಿ ಪ್ರತಿಜ್ಞೆಗಳನ್ನು ಮಾಡಿ ಅದನ್ನು ಜಾರಿಗೊಳಿಸಿದರೆ ಹಿಂಸಾಚಾರವನ್ನು ನಿಲ್ಲಸಬಹುದು. ಹೀಗಾದರೆ ಶಾಲೆಗಳನ್ನು ಸುರಕ್ಷಿತಗೊಳಿಸಲು ಮತ್ತು ಆನ್‌ಲೈನ್ ದುರುಪಯೋಗವನ್ನು ನಿಭಾಯಿಸಲು ಕುಟುಂಬಗಳಿಗೆ ನೆರವಾಗಲು ಸಾಧ್ಯವಾಗುತ್ತದೆ. ಜೊತೆಗೆ ಶಾಶ್ವತ ಹಾನಿ ಮತ್ತು ಕಳಪೆ ಆರೋಗ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕ್ರಮಗಳು ಮೂಲಭೂತವಾಗಿ ಅವಶ್ಯಕವಾಗಿದೆ ಎಂದು” ವಿಶ್ವ ಆರೋಗ್ಯ ಸಂಸ್ಥೆಯ ಮಹಾ ನಿರ್ದೇಶಕರಾದ ಡಾ. ಟೆಡ್ರೊಸ್ ಹೇಳಿದ್ದಾರೆ.

ಐದರಲ್ಲಿ ಮೂರು ಮಕ್ಕಳು ತಮ್ಮ ಮನೆಗಳಲ್ಲಿ ದೈಹಿಕ ವಿಧಾನದಿಂದ ನಿಯಮಿತವಾಗಿ ಶಿಕ್ಷೆಗೆ ಒಳಗಾಗುತ್ತಾರೆ. ಜೊತೆಗೆ ಐದು ಹುಡುಗಿಯರಲ್ಲಿ ಒಬ್ಬರು ಮತ್ತು ಏಳು ಹುಡುಗರಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯವನ್ನು ಅನುಭವಿಸುತ್ತಾರೆ ಎಂದು ವಿಶ್ವ ಸಂಸ್ಥೆ ಹೇಳಿದೆ. ಜಗತ್ತಿನ 100 ಕೋಟಿ ಮಕ್ಕಳು

ಇದನ್ನೂ ಓದಿ: ‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

‘ವಿಶ್ವದ ಯಾವುದೇ ಶಕ್ತಿಗೆ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ಪುನಃಸ್ಥಾಪಿಸಲು ಅಸಾಧ್ಯ’ – ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...