Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...