Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...