Homeಮುಖಪುಟದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ - ಕೋರ್ಟ್‌ಗೆ ತಾಹಿರ್ ಹುಸೇನ್

ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

- Advertisement -
- Advertisement -

2020 ರ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿದ ಅವರ ವಾಟ್ಸಾಪ್ ಚಾಟ್‌ಗಳಲ್ಲಿ, ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಲು ಅಥವಾ ಹಿಂಸಾಚಾರದಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ಸೂಚನೆಗಳು ಹೊಂದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಶುಕ್ರವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ಪ್ರಕರಣದಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ ಉಲ್ಲೇಖಿಸಿರುವ ಚಾಟ್‌ಗಳಲ್ಲಿ “ಚಕ್ಕಾ ಜಾಮ್” ಅಥವಾ ರಸ್ತೆ ತಡೆಗಳು ಮತ್ತು ಶಾಂತಿಯುತ ಪ್ರತಿಭಟನೆಗಳನ್ನು ಮಾತ್ರ ಉಲ್ಲೇಖಿಸುತ್ತವೆಯೇ ಹೊರತು ಹಿಂಸಾಚಾರ ಅಥವಾ ಶಸ್ತ್ರಾಸ್ತ್ರಗಳ ಬಳಕೆಯನ್ನಲ್ಲ ಎಂದು ಹುಸೇನ್ ಅವರ ವಕೀಲ ರಾಜೀವ್ ಮೋಹನ್ ವಾದಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಕ್ಕಾ ಜಾಮ್ ಭಯೋತ್ಪಾದಕ ಕೃತ್ಯವಲ್ಲ… ದೆಹಲಿಯ ಪೊಲೀಸರ ಪ್ರಕಾರ ಜನರನ್ನು ಭೇಟಿಯಾಗುವುದು ಮತ್ತು ಪ್ರತಿಭಟಿಸುವುದು ಕೂಡ ಭಯೋತ್ಪಾದಕ ಚಟುವಟಿಕೆಯೇ?” ಮೋಹನ್ ನ್ಯಾಯಾಲಯಕ್ಕೆ ಕೇಳಿದ್ದಾರೆ. “ಭಾರತ ಸರ್ಕಾರ ಅಥವಾ ಅದರ ತನಿಖೆಗಳ ವಿರುದ್ಧ ನಾವು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು ಎಂದು ವಾಟ್ಸಾಪ್ ಸಂದೇಶಗಳಲ್ಲಿ ಎಲ್ಲಿಯೂ ಉಲ್ಲೇಖಿಸಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೇಯ್ ಅವರ ನ್ಯಾಯಾಲಯವು ಪ್ರಕರಣದ ಆರೋಪಗಳನ್ನು ರೂಪಿಸುವ ಕುರಿತು ವಾದಗಳನ್ನು ಆಲಿಸುತ್ತಿತ್ತು.

2020ರ ಫೆಬ್ರವರಿಯಲ್ಲಿ, ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುವವರ ವಿರುದ್ಧ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದರು. ಇದು ಹಿಂಸಾಚಾರಕ್ಕೆ ತಿರುಗಿ, ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿದ್ದರೆ. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದರ ನಂತರ ದೆಹಲಿ ಪೊಲೀಸರು ಹಿಂಸಾಚಾರದ ಹಿಂದಿನ ಸಂಚಿನ ಬಗ್ಗೆ ತನಿಖೆ ನಡೆಸಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಭಯೋತ್ಪಾದನಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ವೇಳೆ ಅವರು ತಾಹಿರ್ ಹುಸೇನ್ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಆರು ಆರೋಪಿಗಳು ಜಾಮೀನು ಪಡೆದಿದ್ದರೆ, 12 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಎಸಗಿದ ವೈಯಕ್ತಿಕ ಕೃತ್ಯಗಳಿಗೆ ಪೊಲೀಸರು ಈಗಾಗಲೇ ಎಫ್‌ಐಆರ್ ಮತ್ತು ಆರೋಪಪಟ್ಟಿ ದಾಖಲಿಸಿದ್ದಾರೆ ಎಂದು ಹುಸೇನ್ ಪರ ವಕೀಲರು ವಾದಿಸಿದ್ದಾರೆ. ಆರೋಪಿಗಳು ಸಶಸ್ತ್ರ ದಂಗೆ ಅಥವಾ ಗಲಭೆಯನ್ನು ಉತ್ತೇಜಿಸಿದ್ದಾರೆ ಎಂಬುದಕ್ಕೆ ಪುರಾವೆಗಳಿಲ್ಲದಿದ್ದರೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯನ್ನು ಪ್ರಕರಣಕ್ಕೆ ಅನ್ವಯಿಸಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...