Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...