Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...