Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...