Homeಕರ್ನಾಟಕಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ 12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ನಗರದ ಈಶಾನ್ಯ ಭಾಗದಲ್ಲಿ ಲಾಜಿಸ್ಟಿಕ್ಸ್ ಸಂಸ್ಥೆಯೊಂದರಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಡಿದು ಕೊಲೆ ಮಾಡಲಾಗಿದ್ದು, ಹೊಂಗಸಂದ್ರದಲ್ಲಿ ಮಹಿಳೆಯೊಬ್ಬರನ್ನು ಆಕೆಯ ಮಗನೆ ಹತ್ಯೆಗೈದಿರುವ ಘಟನೆ ಸಂಭವಿಸಿದೆ. ಬೆಂಗಳೂರು

ಶನಿವಾರ ಬೆಳಗ್ಗೆ ಸಹೋದ್ಯೋಗಿಯೊಬ್ಬರು ಅವರು ಕೆಲಸ ಮಾಡುತ್ತಿದ್ದ ಶೆಡ್‌ಗೆ ಪ್ರವೇಶಿಸಿದಾಗ ಕ್ರಮವಾಗಿ ರಾಮನಗರ ಮತ್ತು ಮಂಡ್ಯ ಮೂಲದ ನಾಗೇಶ್ (52) ಮತ್ತು ಮಂಜು ಗೌಡ (44) ಅವರ ಶವಗಳು ಪತ್ತೆಯಾಗಿವೆ. ಕೊಲೆಗೀಡಾ ವ್ಯಕ್ತಿಗಳಿಬ್ಬರಿಗೆ ಗಟ್ಟಿಯಾದ ವಸ್ತುವಿನಿಂದ ತಲೆಗೆ ಮಾರಣಾಂತಿಕ ಗಾಯ ಮಾಡಲಾಗಿದ್ದು, ತೀವ್ರ ರಕ್ತಶ್ರಾವದ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಬಾಗಲೂರು ಸಮೀಪದ ಸಿಂಗಹಳ್ಳಿಯಲ್ಲಿರುವ ಲಾಜಿಸ್ಟಿಕ್ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ಉದ್ಯೋಗಿಯಾಗಿದ್ದರು. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇವರಿಬ್ಬರ ಜೊತೆ ಶೆಡ್ ಹಂಚಿಕೊಂಡಿದ್ದ ಸಹೋದ್ಯೋಗಿ ಸುರೇಶ್ ಪ್ರಮುಖ ಶಂಕಿತ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂವರು ಸಹೋದ್ಯೋಗಿಗಳು ಮದ್ಯಪಾನ ಮಾಡಲು ಜಮಾಯಿಸಿದ್ದಾಗ ಘಟನೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ 11.30 ರ ಸುಮಾರಿಗೆ ಸುರೇಶ್ ಸ್ಥಳದಿಂದ ಪರಾರಿಯಾಗುವ ಮೊದಲು ನಾಗೇಶ್ ಮತ್ತು ಮಂಜು ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಆರೋಪಿ ಸುರೇಶ್‌ ಹುಡುಕಾಟಕ್ಕಾಗಿ ತಂಡವನ್ನು ರಚಿಸಿದ್ದಾರೆ ಎಂದು ವರದಿ ಹೇಳಿದೆ.

ಎರಡನೇ ಘಟನೆಯಲ್ಲಿ, ತಮಿಳುನಾಡು ಮೂಲದ ಜಯಮ್ಮ ಶುಕ್ರವಾರ ಸಂಜೆ ಆಕೆಯ ಹಿರಿಯ ಮಗ ಉಮೇಶ್ (33) ಅವರನ್ನು ಭೇಟಿ ಮಾಡಿದ ನಂತರ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮೇಶ್ ತಮ್ಮ ತಾಯಿಯ ಜೊತೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಕಾರಣ ಜಯಮ್ಮ ಕಿರಿಯ ಮಗನೊಂದಿಗೆ ಹೊಂಗಸಂದ್ರಕ್ಕೆ ತೆರಳಿದ್ದರು.

ಮಹಿಳೆಯು ಇದ್ದ ಮನೆಯ ಓನರ್‌ ಜಯಮ್ಮ ಅವರ ದೇಹವನ್ನು ಪತ್ತೆ ಮಾಡಿದ್ದು, ಈ ವೇಳೆ ಮೃತದೇಹದಲ್ಲಿ ಕತ್ತು ಹಿಸುಕಿರುವುದು ಅಥವಾ ಉಸಿರುಗಟ್ಟಿಸುವಿಕೆಯ ಗುರುತುಗಳನ್ನು ಹೊಂದಿದ್ದು, ಹಾಗಾಗಿ ಅವರು ಪೋಲೀಸರಿಗೆ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತನ್ನ ತಾಯಿ ಇದ್ದ ಹೊಸ ಮನೆಯ ಜಾಡು ಹಿಡಿದು ಆರೋಪಿ ಉಮೇಶ್ ಅಲ್ಲಿಗೆ ತೆರಳಿದ್ದು, ಅಲ್ಲಿ ಅವರೊಂದಿಗೆ ಹಣದ ವಿಚಾರವಾಗಿ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ನಂಬಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಸ್ತಿಯನ್ನು ಮಾರಾಟ ಮಾಡಿದರೂ ಅದರಿಂದ ಬಂದ ಹಣವನ್ನು ಅವರು ಅವರಿಗೆ ನೀಡಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕಿರಿಯ ಮಗ, ಕೆಎಸ್ಆರ್ಟಿಸಿ ಬಸ್ ಚಾಲಕನು ಆನೇಕಲ್ನಲ್ಲಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ.

ಬೊಮ್ಮನಹಳ್ಳಿ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಂಕಿತನನ್ನು ಗುರುತಿಸಲಾಗಿದೆ ಮತ್ತು ಶೀಘ್ರದಲ್ಲೇ ಆತನನ್ನು ಬಂಧಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...