Homeಮುಖಪುಟಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

- Advertisement -
- Advertisement -

ಜನರಿಗೆ ವಾಟ್ಸಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆಗಳನ್ನು ನೀಡಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ನವೆಂಬರ್ 8ರ ಶುಕ್ರವಾರದಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ವಾಟ್ಸಾಪ್ ಮೂಲಕ ನಾಗರಿಕರಿಗೆ ಎಲ್ಲಾ ರೀತಿಯ ಸೇವೆಗಳನ್ನು ಒದಗಿಸಲು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾಟ್ಸಾಪ್ ಮೂಲಕ ಕನಿಷ್ಠ 100 ವಿವಿಧ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ರಿಯಲ್ ಟೈಮ್ ಗವರ್ನೆನ್ಸ್ (ಆರ್‌ಟಿಜಿ) ಸಚಿವ ನಾರಾ ಲೋಕೇಶ್ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. “ಇನ್ನೂ 90 ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರಗಳನ್ನು ಕ್ಯೂಆರ್ ಕೋಡ್ ಮೂಲಕ ಪಡೆಯುವಂತೆ ನೋಡಿಕೊಳ್ಳಲು ಕ್ರಮಗಳು ಸಹ ನಡೆಯುತ್ತಿವೆ” ಎಂದು ಅವರು ತಿಳಿಸಿದ್ದಾರೆ. ಆಂಧ್ರಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಜಿಟಲ್ ಸಹಿಯೊಂದಿಗೆ ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಮಾರ್ಗಸೂಚಿಗಳಿದ್ದರೂ, ಹೆಚ್ಚಿನ ಅಧಿಕಾರಿಗಳಿಗೆ ಈ ನಿಯಮದ ಬಗ್ಗೆ ತಿಳಿದಿಲ್ಲ, ಹೀಗಾಗಿ ವಿದ್ಯಾರ್ಥಿಗಳು ಭೌತಿಕ ಪ್ರಮಾಣಪತ್ರಗಳನ್ನು ಸಲ್ಲಿಸಲು ಒತ್ತಾಯಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ 40 ಲಕ್ಷ ಜನರ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ನಾಯ್ಡು ಅವರಿಗೆ ತಿಳಿಸಿದಾಗ, ತಕ್ಷಣವೇ ಡೇಟಾವನ್ನು ಸಂಗ್ರಹಿಸಿ ಅದನ್ನು ಪರಸ್ಪರ ಜೋಡಿಸಲು ಕ್ರಮಕೈಗೊಳ್ಳುವಂತೆ ಅವರು ಅವರಿಗೆ ಸೂಚಿಸಿದ್ದಾರೆ. ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಮೂಲಕ ರಾಜ್ಯದ ಎಲ್ಲಾ ಮನೆಗಳನ್ನು ಇಂಟರ್‌ಲಿಂಕ್ ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಡೀ ದತ್ತಾಂಶವನ್ನು ಒಂದಕ್ಕೊಂದು ಜೋಡಿಸುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಮೂಡುತ್ತದೆ, ಹೀಗಾಗಿ ಭ್ರಷ್ಟಾಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸಿಎಂ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಅಧಿಕಾರಿಗಳು ದತ್ತಾಂಶ ಏಕೀಕರಣದ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಮತ್ತು ಸಾಧ್ಯವಾದಷ್ಟು ಬೇಗ ಅದನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯೂ ಆಧಾರ್ ಪಡೆಯುವಂತೆ ನೋಡಿಕೊಳ್ಳಬೇಕು ಮತ್ತು ನವಜಾತ ಶಿಶುವಿಗೂ ಆಧಾರ್ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರವು 40 ವಿವಿಧ ಇಲಾಖೆಗಳನ್ನು ಹೊಂದಿದ್ದು, ಸರ್ಕಾರದ 128 ವಿವಿಧ ವಿಭಾಗಗಳಲ್ಲಿ 178 ಡೇಟಾ ಕ್ಷೇತ್ರಗಳಿಂದ 500 ಟಿಬಿ ಡೇಟಾ ಲಭ್ಯವಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ರಿಯಲ್ ಟೈಮ್ ಗವರ್ನೆನ್ಸ್ ಮುಖ್ಯ ದತ್ತಾಂಶ ಸಂಪನ್ಮೂಲವಾಗಬೇಕು ಎಂದು ಒತ್ತಿ ಹೇಳಿದ ಅವರು, ಎಲ್ಲಾ ಇಲಾಖೆಗಳ ಡೇಟಾವನ್ನು ಪರಸ್ಪರ ಲಿಂಕ್ ಮಾಡಲು ಮತ್ತು ಈ ಡೇಟಾದ ಮೂಲಕ ಸಾಮಾನ್ಯ ವೇದಿಕೆಗೆ ತರಬೇಕು. ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲಾ ಯೋಜನೆಗಳು ಮತ್ತು ಇತರ ಕಾರ್ಯಕ್ರಮಗಳನ್ನು ವಿಶ್ಲೇಷಿಸಬೇಕು ಎಂದು ಅಧಿಕಾರಿಗಳಿಗೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಸಮುದ್ರ ಗಡಿ ದಾಟಿದ ಆರೋಪ; ಮತ್ತೆ 23 ತಮಿಳು ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...