Homeಮುಖಪುಟನೆಟ್‌ಫ್ಲಿಕ್ಸ್‌ನ 'ದೋ ಪಟ್ಟಿ' ವಿರುದ್ಧ ಬಹಿಷ್ಕಾರಕ್ಕೆ ಹೂಡಾ ಖಾಪ್ ಪಂಚಾಯತ್ ನಿರ್ಧಾರ

ನೆಟ್‌ಫ್ಲಿಕ್ಸ್‌ನ ‘ದೋ ಪಟ್ಟಿ’ ವಿರುದ್ಧ ಬಹಿಷ್ಕಾರಕ್ಕೆ ಹೂಡಾ ಖಾಪ್ ಪಂಚಾಯತ್ ನಿರ್ಧಾರ

- Advertisement -
- Advertisement -

ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ‘ದೋ ಪಟ್ಟಿ’ ಸಿನಿಮಾದ ವಿರುದ್ಧ ಹರಿಯಾಣದ ಪ್ರಭಾವಿ ‘ಹೂಡಾ’ ಸಮುದಾಯ ಸಾಮಾಜಿಕ ಬಹಿಷ್ಕಾರಕ್ಕೆ ತಮ್ಮ ಖಾಪ್‌ ಪಂಚಾಯತ್‌ನಲ್ಲಿ ಈ ನಿರ್ಧಾರ ಕೈಗೊಂಡಿದೆ. ಸಿನಿಮಾದ ನಿರ್ಮಾಪಕರು, ಪಾತ್ರವರ್ಗ ಮತ್ತು ನೆಟ್‌ಫ್ಲಿಕ್ಸ್‌ ಇಂಡಿಯಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿರುವ ಹೂಡಾ ಖಾಪ್ ಪಂಚಾಯತ್, ಚಿತ್ರದಿಂದ `ಹೂಡಾ’ ಪದವನ್ನು ಅಳಿಸಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಮುದಾಯವು ಸಭೆ ಕರೆದು ‘ತೀವ್ರ ಕ್ರಮ’ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸಂತ್‌ಪುರದಲ್ಲಿರುವ ಸರ್ವ್ ಹೂಡಾ ಖಾಪ್‌ನ ವೇದಿಕೆಯಲ್ಲಿ ಭಾನುವಾರ ಹೂಡಾ ಖಾಪ್ ಸಭೆಯನ್ನು ಕರೆದಿದ್ದಾರೆ. ನಟ ಶಾಹೀರ್ ಶೇಖ್ ಅವರ ಅವಹೇಳನಕಾರಿ ಸಂಭಾಷಣೆಯಿಂದ ‘ಹೂಡಾ’ ಪದವನ್ನು ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದು, ತಮ್ಮ ಈಡೇರರಿದ್ದರೆ ದೋ ಪಟ್ಟಿ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾ ವಿರುದ್ಧ ಕೈಗೊಳ್ಳುವ ಕ್ರಮಗಳ ಬಗ್ಗೆ ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಹೂಡಾ ಖಾಪ್‌ನ ಮುಖ್ಯಸ್ಥ ಓಂ ಪ್ರಕಾಶ್ ಹೂಡಾ ಮತ್ತು ಸಾಮಾಜಿಕ ಕಾರ್ಯಕರ್ತ ಸುರೇಂದರ್ ಸಿಂಗ್ ಹೂಡಾ, “ದೋ ಪಟ್ಟಿ ಮತ್ತು ನೆಟ್‌ಫ್ಲಿಕ್ಸ್‌ ಇಂಡಿಯಾ, ನಿರ್ಮಾಪಕರು, ನಟರು, ನಿರ್ದೇಶಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಎಲ್ಲಿಯವರೆಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವುದಿಲ್ಲವೊ ಮತ್ತು ತಮ್ಮ ಚಲನಚಿತ್ರದಿಂದ `ಹೂಡಾ’ ಪದವನ್ನು ಅಳಿಸುವುದಿಲ್ಲವೋ ಅಲ್ಲಿಯವರೆಗೆ ಚಿತ್ರದ ನಿರ್ಮಾಪಕರು, ನಟರು, ನಿರ್ದೇಶಕರು ಮತ್ತು ನೆಕ್ಸ್ಟ್‌ಫ್ಲಿಕ್ಸ್ ಸಾಮಾಜಿಕ ಬಹಿಷ್ಕಾರ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಹಾಗೂ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಖಾಪ್ ಪಂಚಾಯತ್ ಒತ್ತಾಯಿಸಿದ್ದು, ಅವರು ಕ್ರಮ ಕೈಗೊಳ್ಳದಿದ್ದಲ್ಲಿ ಹೂಡಾ ಖಾಪ್ ಮಾತ್ರವಲ್ಲದೆ ಜಾಟ್ ಸಮುದಾಯವೂ “ತೀವ್ರ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು. ” ಎಂದು ಹೇಳಿದ್ದಾರೆ.

“ಅಲ್ಲದೆ, ಎಲ್ಲಾ ಖಾಪ್‌ಗಳು ಮತ್ತು ಜಾಟ್ ಸಮುದಾಯಗಳಿಗೆ ವಿರುದ್ಧವಾದ ಎಲ್ಲಾ ರೀತಿಯ ಅವಹೇಳನಕಾರಿ ವಿಷಯಗಳನ್ನು ತೆಗೆದುಹಾಕಬೇಕು ಮತ್ತು ನಿಲ್ಲಿಸಬೇಕು. ಇಲ್ಲದಿದ್ದರೆ ಅದು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗಿದೆ. ರೋಹ್ಟಕ್ ಸಂಸತ್ ಸದಸ್ಯ ದೀಪಿಂದರ್ ಸಿಂಗ್ ಹೂಡಾ ಮತ್ತು ಸ್ಥಳೀಯ ಶಾಸಕ ಮತ್ತು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಕ್ರಮವಾಗಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...