Homeಕರ್ನಾಟಕರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! - ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

- Advertisement -
- Advertisement -

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158

ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು), ಇತರ ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ಹೆಚ್ಚುವರಿ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಅದಾಗ್ಯೂ, ಶೂನ್ಯ ದಾಖಲಾತಿ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24 ರಲ್ಲಿ ಏಕ ಶಿಕ್ಷಕರು ಇದ್ದ 6,360 ಶಾಲೆಗಳು ಇದ್ದು, 2024-25 ರಲ್ಲಿ ಇದರ ಸಂಖ್ಯೆ 6,158ಕ್ಕೆ ಇಳಿಕೆಯಾಗಿದೆ. ಅಂದರೆ ಒಂದು ವರ್ಷದಲ್ಲಿ 202 ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ ಎಂದು ವರದಿ ಉಲ್ಲೇಖಿಸಿದ್ದು, ಮಕ್ಕಳು ಶಾಲೆ ತೊರೆದ ಕಾರಣಕ್ಕೆ ದಾಖಲಾತಿ ಕಡಿಮೆಯಾಗಿದೆ ಎಂದು ತಜ್ಞರು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ವಿಷಯ ಶಿಕ್ಷಕರ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಕರನ್ನು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ನಿಯೋಜಿಸಲಾಗುತ್ತಿದ್ದು, ಗಣಿತ ಮತ್ತು ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಿಗೆ ಶಿಕ್ಷಕರ ನಿಯೋಜನೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಅದೇ ರೀತಿ, “100% ಉತ್ತೀರ್ಣ ದರವನ್ನು” ಕಾಪಾಡಿಕೊಳ್ಳಲು, ಶಾಲೆಗಳು ಸಾಮಾನ್ಯವಾಗಿ “ಶೈಕ್ಷಣಿಕವಾಗಿ ದುರ್ಬಲ ಆಗಿರುವ ವಿದ್ಯಾರ್ಥಿಗಳನ್ನು ಹೊರಗೆ ತಳ್ಳುತ್ತಿವೆ” ಎಂದು ತಜ್ಞರ ಹೇಳಿಕೆಯನ್ನು ವರದಿಯು ಹೇಳಿದೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, “ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಆದರೆ, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ತೆರಳಬೇಕು ಎಂದು ಪೊಷಕರು ಬಯಸುತ್ತಾರೆ. ಅದಕ್ಕಾಗಿ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ” ಎಂದು ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಇದಲ್ಲದೆ, ಒಬ್ಬ ವಿದ್ಯಾರ್ಥಿಯು ಉನ್ನತ ಪ್ರಾಥಮಿಕ ಹಂತವನ್ನು ತಲುಪುವ ಹೊತ್ತಿಗೆ, ಶಾಲೆಗಳು ಉದ್ದೇಶಪೂರ್ವಕವಾಗಿ 10 ನೇ ತರಗತಿಯಲ್ಲಿ ‘100% ಉತ್ತೀರ್ಣ ದರ’ ಕಾಯ್ದುಕೊಳ್ಳಲು ಶೈಕ್ಷಣಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಯನ್ನು ಹೊರಹಾಕುತ್ತವೆ. ಆದರೆ, ಇದು ನಿಜವಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ, ಬದಲಾಗಿ ವ್ಯವಸ್ಥೆಯ ವೈಫಲ್ಯವನ್ನು ಮರೆಮಾಡುತ್ತದೆ” ಎಂದು ಹೇಳಿದ್ದಾರೆ.

7 ಮತ್ತು 8 ನೇ ತರಗತಿ ಮತ್ತು 10 ನೇ ತರಗತಿಯ ನಡುವೆ ಡ್ರಾಪ್ಔಟ್ ದರಗಳು ಏಕೆ ಹೆಚ್ಚಾಗುತ್ತವೆ ಎಂಬ ಬಗ್ಗೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದ 6,158

“ಈ ಮಕ್ಕಳು ಎಲ್ಲಿಗೆ ಹೋಗುತ್ತಾರೆ? ಅವರು ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಬಾಲಕಾರ್ಮಿಕರು ಇಲ್ಲ ಎಂದು ಸರ್ಕಾರ ಹೇಳಿಕೊಂಡರೂ. ಈ ಮಕ್ಕಳಲ್ಲಿ ಕೆಲವರು ಬಲವಂತವಾಗಿ ದುಡಿಮೆಗೆ ತಳ್ಳಲ್ಪಡುತ್ತಿದ್ದಾರೆ. ಇನ್ನು ಕೆಲವರು ಬಾಲ್ಯವಿವಾಹಕ್ಕೆ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ಸಂಬಂಧಿಸಿದ ಇಲಾಖೆಗಳು ಯಾವುದೇ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಶಿಕ್ಷಕರು ಹೆಚ್ಚಾಗಿ ನಗರಗಳು ಅಥವಾ ಪಟ್ಟಣಗಳ ಶಾಲೆಗಳಿಗೆ ವರ್ಗಾಯಿಸಲು ಪ್ರಭಾವ ಬಳಸುತ್ತಾರೆ. ಅನೇಕ ಸಂದರ್ಭಗಳಲ್ಲಿ, ಶಿಕ್ಷಕರೂ ಕೂಡಾ ದೂರದ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕೆಲಸಕ್ಕೆ ತೆರಳದ ಕಾರಣ ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಕಲಿಕೆಯಿಂದ ವಂಚಿತರಾಗುತ್ತಾರೆ. ಇದರಲ್ಲಿ ಶಿಕ್ಷಕರಿಗೂ ಅನ್ಯಾಯವಾಗುತ್ತದೆ. ಏಕೆಂದರೆ ಅವರಿಗೆ ವಸತಿ ಒದಗಿಸದಿದ್ದರೆ, ಅವರು ಪ್ರತಿದಿನ 50 ಕಿಮೀ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಅಭಿವೃದ್ಧಿ ಶಿಕ್ಷಣತಜ್ಞ ಪ್ರಾಧ್ಯಾಪಕ ನಿರಂಜನಾರಾಧ್ಯ ವಿಪಿ ಮಾತನಾಡಿ, “ಇಡೀ ಶಾಲೆ ಒಬ್ಬ ಶಿಕ್ಷಕರನ್ನು ಹೊಂದಿರುವುದು ಶಿಕ್ಷಣ ಹಕ್ಕು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಯ್ದೆಯ ಪ್ರಕಾರ, ಲೋವರ್ ಪ್ರೈಮರಿ ಸ್ಕೂಲ್ (ಎಲ್‌ಪಿಎ) ಕನಿಷ್ಠ ಇಬ್ಬರು ಶಿಕ್ಷಕರನ್ನು ಹೊಂದಿರಬೇಕು ಹಾಗೂ ಹೈಯರ್ ಪ್ರೈಮರಿ ಸ್ಕೂಲ್ (ಎಚ್‌ಪಿಎ) ಕನಿಷ್ಠ ಮೂವರು ಶಿಕ್ಷಕರನ್ನು ಹೊಂದಿರಬೇಕು” ಅವರು ಹೇಳಿದ್ದಾರೆ. ಒಂದು ಶಾಲೆಗೆ ಒಬ್ಬ ಶಿಕ್ಷಕ ಇದ್ದರೆ ಅಂತಹ ಶಾಲೆಗೆ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

“ಕೇವಲ ಕಲಿಕೆಯ ಮಾಧ್ಯಮವಾಗಿ ಅಲ್ಲ, ಕನಿಷ್ಠ ಭಾಷೆಯಾಗಿ ಆದರೂ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಹೆಚ್ಚಿನ ಪೋಷಕರು ಬಯಸುತ್ತಾರೆ. ಆದರೆ, ಒಬ್ಬ ಶಿಕ್ಷಕ ಈ ಎಲ್ಲಾ ವಿಷಯಗಳು, ತರಗತಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಇಲಾಖೆ ಚಾಲನೆ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಗುರಿಯನ್ನು ಇದು ಹೊಂದಿದ್ದು, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ನೇಮಕಾತಿ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...