Homeಮುಖಪುಟಕೇರಳ | 'ಮಲ್ಲು ಹಿಂದೂ ಆಫೀಸರ್ಸ್' ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು...

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

- Advertisement -
- Advertisement -

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಕಾರ್ಯವೈಖರಿ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ-ಸರ್ಕಾರದ ಉಪಕ್ರಮವಾದ ‘ಉನ್ನತಿ’ಯಿಂದ ಕಡತಗಳು ನಾಪತ್ತೆಯಾಗಿವೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ ಬಳಿಕ, ಅಧಿಕಾರಿಗಳಾದ ಪ್ರಶಾಂತ್ ಮತ್ತು ಜಯತಿಲಕ್ ನಡುವೆ ಜಗಳ ಶುರುವಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರು ‘ಉನ್ನತಿ’ ಉಪಕ್ರಮದ ನೇತೃತ್ವ ವಹಿಸಿದ್ದ ಪ್ರಶಾಂತ್ ಅವರ ಸರ್ಕಾರಕ್ಕೆ ವರದಿ ನೀಡಿದ್ದರು.

ನಂತರ ಪ್ರಶಾಂತ್ ಅವರ ಹಾಜರಾತಿ ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದ ಮೇಲೆ ಮಾತೃಭೂಮಿ ನ್ಯೂಸ್ ಮತ್ತೊಂದು ವರದಿ ಮಾಡಿತ್ತು.

ನವೆಂಬರ್ 9ರ ಶನಿವಾರದಂದು, ಜಯತಿಲಕ್ ಅವರು ವರದಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಶಾಂತ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಲವಾರು ಯುವ ಐಎಎಸ್ ಅಧಿಕಾರಿಗಳ ಜೀವನವನ್ನು ಹಾಳು ಮಾಡಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ಉಪಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಶಾಂತ್ ಅವರು ತಮ್ಮ ಹಿರಿಯ ಅಧಿಕಾರಿಯನ್ನು ಸಿನಿಮಾ ಡೈಲಾಗ್ ಬಳಸಿ ಲೇವಡಿ ಮಾಡಿದ್ದರು.

ಅಮಾನತ್ತಾದ ಇನ್ನೋರ್ವ ಅಧಿಕಾರಿ ಗೋಪಾಲಕೃಷ್ಣನ್ ಅವರು ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ಆರೋಪವಿದೆ. ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ವಾಟ್ಸಾಪ್ ಗ್ರೂಪನ್ನು ದೀಪಾವಳಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ರಚಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಐಎಎಸ್ ಅಧಿಕಾರಿಗಳು ಈ ಬಗ್ಗೆ ಗೋಪಾಲಕೃಷ್ಣನ್ ಬಳಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ನಂತರ ಆ ವಾಟ್ಸಾಪ್ ಗ್ರೂಪನ್ನು ಡಿಲಿಟ್ ಮಾಡಲಾಗಿತ್ತು.

ಗ್ರೂಪಿನ ಸ್ಕ್ರೀನ್‌ಶಾಟ್ ಮಾಧ್ಯಮಗಳಿಗೆ ಸೋರಿಕೆಯಾದಾಗ, ಗೋಪಾಲಕೃಷ್ಣನ್ ತಮ್ಮ ಮೊಬೈಲ್ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. “ಯಾರೋ ನನ್ನ ಮೊಬೈಲ್ ಹ್ಯಾಕ್ ಮಾಡಿದಂತೆ ತೋರುತ್ತಿದೆ, ಅದರಲ್ಲಿ 11 ಗ್ರೂಪ್‌ಗಳನ್ನು ರಚಿಸಿದ್ದಾರೆ. ನನ್ನ ಎಲ್ಲಾ ಸಂಪರ್ಕ ಸಂಖ್ಯೆಗಳನ್ನು ಅದಕ್ಕೆ ಸೇರಿಸಿದ್ದಾರೆ. ನಾನು ಈಗ ವಾಟ್ಸಾಪ್ ಅನ್‌ ಇನ್‌ಸ್ಟಾಲ್ ಮಾಡಿದ್ದೇನೆ. ಅದರಲ್ಲಿದ್ದ ಎಲ್ಲಾ ಗ್ರೂಪ್‌ಗಳನ್ನು ಮ್ಯಾನುಅಲ್ ಆಗಿ ತೆಗೆದು ಹಾಕಿದ್ದೇನೆ. ಶೀಘ್ರದಲ್ಲೇ ನನ್ನ ಫೋನ್ ಬದಲಾಯಿಸುತ್ತೇನೆ” ಎಂದು ಹೇಳಿಕೊಂಡಿದ್ದರು.

ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಗೋಪಾಲಕೃಷ್ಣನ್ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವರ ಮೊಬೈಲ್ ಹ್ಯಾಕ್‌ ಆದ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲದೆ, ಪೊಲೀಸರಿಗೆ ನೀಡುವ ಮೊದಲು ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದೇನೆ ಎಂದು ಗೋಪಾಲಕೃಷ್ಣನ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಮೊಬೈಲ್ ಸೈಬರ್ ದಾಳಿಗೆ ಒಳಗಾದ ಯಾವುದೇ ಲಕ್ಷಣಗಳು ಗೋಪಾಕೃಷ್ಣನ್ ಅವರ ಮೊಬೈಲ್‌ನಲ್ಲಿ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...