Homeಮುಖಪುಟಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ

- Advertisement -
- Advertisement -

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ನಿನ್ನೆ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ನಿನ್ನೆ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

ಇದನ್ನೂ ಓದಿ : ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...