Homeಮುಖಪುಟಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ

- Advertisement -
- Advertisement -

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ನಿನ್ನೆ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ನಿನ್ನೆ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

ಇದನ್ನೂ ಓದಿ : ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...