Homeಮುಖಪುಟಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

- Advertisement -
- Advertisement -

ಮಹಾರಾಷ್ಟ್ರದ 2019ರ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಮತ್ತು ಅವಿಭಜಿತ ಎನ್‌ಸಿಪಿ ಜೊತೆಗೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಕೂಡಾ ಭಾಗವಹಿಸಿದ್ದರು ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಮತ್ತು ತಾನು (ಅವಿಭಜಿತ ಎನ್‌ಸಿಪಿಯ ಭಾಗವಾಗಿದ್ದ) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮುಂಜಾನೆ ಸಮಾರಂಭಕ್ಕೂ ಮುನ್ನ ನಡೆದ ಬೆಳವಣಿಗೆಗಳ ಬಗ್ಗೆ ಅಜಿತ್ ಪವಾರ ಮಾತನಾಡಿದ್ದಾರೆ. ಮಹಾರಾಷ್ಟ್ರ

“ನಿಮಗೆ ಗೊತ್ತಿಲ್ಲವೇ? ಇದು ಐದು ವರ್ಷಗಳ ಹಿಂದೆ ನಡೆದ ಘಟನೆ. ಸಭೆ ಎಲ್ಲಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತು… ಎಲ್ಲರೂ ಅಲ್ಲಿದ್ದರು. ಮತ್ತೊಮ್ಮೆ ಹೇಳುತ್ತೇನೆ. ಅಮಿತ್ ಶಾ ಇದ್ದರು, ಗೌತಮ್ ಅದಾನಿ ಇದ್ದರು, ಪ್ರಫುಲ್ ಪಟೇಲ್ ಇದ್ದರು, ದೇವೇಂದ್ರ ಫಡ್ನವಿಸ್ ಇದ್ದರು, ಅಜಿತ್ ಪವಾರ್ ಇದ್ದರು, ಪವಾರ್ ಸಾಹೇಬ್(ಶರದ್ ಪವಾರ್) ಇದ್ದರು” ಎಂದು ಸ್ವತಂತ್ರ ಮಾಧ್ಯಮ ನ್ಯೂಸ್‌ ಮಿನಿಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಜಿತ್ ಪವಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಶರದ್ ಪವಾರ್ ಅವರನ್ನು ಬೆಂಬಲಿಸದಿರಲು ನಿರ್ಧರಿಸಿದ್ದರಿಂದ, ಅಜಿತ್ ಅವರ ವಿರುದ್ಧ ಬಂಡಾಯ ಎದ್ದಿದ್ದರು. ಆದರೆ ನಂತರ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಮತ್ತೆ ಶರದ್ ಪವಾರ್ ಅವರ ಪಕ್ಷಕ್ಕೆ ಮರಳಿದ್ದರು. ಅದ ಅದಾಗ್ಯೂ, ಕೇವಲ 5 ದಿನಗಳಿಗೆ ಸರ್ಕಾರ ಪತನವಾಗಿತ್ತು. ಕೆಲವು ದಿನಗಳ ನಂತರ, ಅವಿಭಜಿತ ಎನ್‌ಸಿಪಿ ಮತ್ತು ಶಿವಸೇನೆಯು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿತ್ತು. ಮಹಾರಾಷ್ಟ್ರ

ಈ ವೇಳೆ ಶರದ್ ಪವಾರ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್ “ಶರದ್ ಪವಾರ್ ಅವರ ಮನಸ್ಸನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಒಬ್ಬನೇ ವ್ಯಕ್ತಿಯೂ ಊಹಿಸಲು ಸಾಧ್ಯವಿಲ್ಲ. ನಮ್ಮ ಚಿಕ್ಕಮ್ಮ ಆಗಲಿ, ಅವರ ಮಗಳು ಸುಪ್ರಿಯಾ  ಅವರಿಗೆ ಕೂಡ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅಜಿತ್ ಪವಾರ್ ಅವರ ಹೇಳಿಕೆ ಈಗ ರಾಜಕೀಯ ಚರ್ಚಕ್ಕೆ ದಾರಿ ಮಾಡಿಕೊಟ್ಟಿದೆ.

ಗೌತಮ್ ಅದಾನಿ ಭಾಗವಹಿಸಿದ್ದ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಎನ್‌ಸಿಪಿ-ಎಸ್‌ಪಿ ನಾಯಕಿ ಸುಪ್ರಿಯಾ ಸುಳೆ ಪ್ರತಿಕ್ರಿಯಿಸಿದ್ದು, ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. “ಅವರು ಸಂದರ್ಶನದಲ್ಲಿ ಪ್ರಸ್ತಾಪಿಸಿದ ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ನನಗೆ ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ (ಯುಬಿಟಿ) ವಕ್ತಾರ ಪ್ರಿಯಾಂಕಾ ಚತುರ್ವೇದಿ ಅವರು ‘X’ನಲ್ಲಿ ಪ್ರತಿಕ್ರಿಯಿಸಿದ್ದು, “ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಡಿಜಿಟಲ್ ವೇದಿಕೆಗೆ ನೀಡಿದ ಸಂದರ್ಶನದ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹೇಗೆ ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸುವ ಸಭೆಗಳಲ್ಲಿ ಗೌತಮ್ ಅದಾನಿ ಭಾಗವಹಿಸಿದ್ದಾರೆ. ಇದು ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

“ಅವರು ಬಿಜೆಪಿಯ ಅಧಿಕೃತ ಸಂಧಾನಕಾರರೇ? ಮೈತ್ರಿಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯೇ? ಮಹಾರಾಷ್ಟ್ರದಲ್ಲಿ ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉದ್ಯಮಿಯೊಬ್ಬರು ಏಕೆ ಇಷ್ಟು ಉತ್ಸಾಹದಿಂದ ಮತ್ತು ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾಗಿ TNIE ವರದಿ ಮಾಡಿದೆ. ಅಷ್ಟೆ ಅಲ್ಲದೆ, ಅದಾನಿ ಗ್ರೂಪ್‌ನ ವಕ್ತಾರರೂ ಇದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಈ ಸಭೆ ಐದು ವರ್ಷಗಳ ಹಿಂದೆ ನಡೆದಿದೆ ಎಂದು ಅಜಿತ್ ಪವಾರ್ ಸಂದರ್ಶನದಲ್ಲಿ ಹೇಳಿದ್ದರೂ, ಅವರು ಪ್ರಸ್ತಾಪಿಸಿದ ಸಭೆ 2017 ರಲ್ಲಿ ಸಂಭವಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...