Homeಮುಖಪುಟಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

ಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

- Advertisement -
- Advertisement -

ಮಣಿಪುರದ ಜಿರಿಬಾಮ್‌ನ ಬಳಿಯ ಮನೆಗಳಿಂದ ಮೈತೆಯಿ ಸಮುದಾಯದ ಇಬ್ಬರು ವ್ಯಕ್ತಿಗಳ ಶವಗಳನ್ನು ಮಂಗಳವಾರ ಬೆಳಗ್ಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ 10 ಶಂಕಿತ ಉಗ್ರರನ್ನು ಹೊಡೆದುರುಳಿಸಿದ್ದಾಗಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಮಣಿಪುರ

ಸೋಮವಾರ ನಡೆದ ಗುಂಡಿನ ಚಕಮಕಿಯಿಂದ ಆ ಪ್ರದೇಶದಲ್ಲಿನ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹ್ಮಾರ್ ಸಮುದಾಯ ಬಹುಸಂಖ್ಯಾತರಾಗಿರುವ ನೆರೆಯ ಫೆರ್ಜಾಲ್ ಜಿಲ್ಲೆಯ ಬೆಟ್ಟಗಳ ಸಮೀಪವಿರುವ ಜಿರಿಬಾಮ್ ಜಿಲ್ಲೆಯ ಜಕುರಾಧೋರ್ ಮತ್ತು ಬೊರೊಬೆಕ್ರಾ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಹ್ಮಾರ್ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ದೊಡ್ಡ ಗುಂಡಿನ ಚಕಮಕಿಗೆ ನಡೆದಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಕುರಾದೋರ್‌ನಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮತ್ತು ಹತ್ತಿರದ ಬೊರೊಬೆಕ್ರಾ ಪೊಲೀಸ್ ಠಾಣೆಯ ಮೇಲೆ ಗುಂಡಿನ ದಾಳಿ ನಡೆದ ನಂತರ ಈ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಮುಂಜಾನೆಯೇ ಈ ಪ್ರದೇಶದಲ್ಲಿನ ಮೈತೇಯಿ ಬಾಹುಳ್ಯದ ಪ್ರದೇಶಗಳ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಲೈಶ್ರಾಮ್ ಬರೇಲ್ ಸಿಂಗ್ (63) ಮತ್ತು ಮೈಬಮ್ ಕೇಶ್ವೋ ಸಿಂಗ್ (71) ಎಂದು ಗುರುತಿಸಲಾದ ಇಬ್ಬರ ಶವಗಳನ್ನು ಪೊಲೀಸರು ಜಕುರಾಧೋರ್ ಪ್ರದೇಶದ ಮನೆಗಳಿಂದ ವಶಪಡಿಸಿಕೊಂಡಿದ್ದಾರೆ. ಈ ಇಬ್ಬರು ಬೊರೊಬೆಕ್ರಾ ಪೊಲೀಸ್ ಠಾಣೆಯ ಪರಿಹಾರ ಶಿಬಿರದಲ್ಲಿ ತಂಗಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸೋಮವಾರದ ಗುಂಡಿನ ದಾಳಿಯಿಂದ ಶಿಬಿರದಿಂದ 10 ಮಂದಿ ನಾಪತ್ತೆಯಾಗಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಪ್ರದೇಶದಲ್ಲಿ ಮೊದಲ ಬಾರಿಗೆ ಹಿಂಸಾಚಾರ ಭುಗಿಲೆದ್ದು, ಬೆಂಕಿ ಹಚ್ಚಲ್ಪಟ್ಟ ನಂತರ ಸಮೀಪದ ಹಳ್ಳಿಗಳ ನಿವಾಸಿಗಳಿಗಾಗಿ ಪೊಲೀಸ್ ಠಾಣೆಯಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾತ್ತು. ಈ ಶಿಬಿರದಲ್ಲಿ 118 ಜನರು ತಂಗಿದ್ದಾರೆ ಎಂದು ನಿವಾಸಿ ಯುರೆಂಬಮ್ ಸಂಜೋಯ್ ಸಿಂಗ್ ಹೇಳಿದ್ದಾರೆ. ಈ ಪ್ರದೇಶದಿಂದ ಸ್ಥಳಾಂತರಗೊಂಡ ಉಳಿದ ಮೈತೇಯಿ ಜನರು 20 ಕಿಮೀ ದೂರದಲ್ಲಿರುವ ಜಿರಿಬಾಮ್ ಜಿಲ್ಲಾ ಕೇಂದ್ರದಲ್ಲಿರುವ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

“ಹಗಲಿನ ವೇಳೆಯಲ್ಲಿ, ಪರಿಹಾರ ಶಿಬಿರದಲ್ಲಿ ವಾಸಿಸುವ ಜನರು ಹೊರಗೆ ಹೋಗುತ್ತಾರೆ. ನಿನ್ನೆಯ ಗುಂಡಿನ ದಾಳಿ ನಂತರ ಜನರು ಇಲ್ಲಿಂದ ಓಡಲು ಪ್ರಾರಂಭಿಸಿದರು. ದಾಳಿ ಕಡಿಮೆಯಾದ ನಂತರ, ಪರಿಹಾರ ಶಿಬಿರದಿಂದ 10 ಜನರು ನಾಪತ್ತೆಯಾಗಿರುವುದನ್ನು ನಾವು ಕಂಡುಕೊಂಡಿದ್ದೇವೆ.” ಎಂದು ಅವರು ಹೇಳಿದ್ದಾರೆ.

“ಇಂದು ಬೆಳಿಗ್ಗೆ, ಎರಡು ಶವಗಳು ಪತ್ತೆಯಾಗಿವೆ ಮತ್ತು ಇನ್ನಿಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ … ಆರು ಜನರು ಇನ್ನೂ ಕಾಣೆಯಾಗಿದ್ದಾರೆ, ಅವರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಅವರು ಎಲ್ಲಿರಬಹುದು ಅಥವಾ ಅವರಿಗೆ ಏನಾರಿರಬಹುದು ಎಂದು ನಾವು ಆತಂಕದಲ್ಲಿದ್ದೇವೆ” ಎಂದು ಅವರು ಹೇಳಿದರು. ಹಿಂಸಾಚಾರದ ನಂತರ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...