Homeಮುಖಪುಟನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

ನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

- Advertisement -
- Advertisement -

ನೆದರ್ಲ್ಯಾಂಡ್ ರಾಜಧಾನಿ ಆಮ್‌ಸ್ಟರ್‌ಡ್ಯಾಮ್​ನಲ್ಲಿ ಸೋಮವಾರ (ನ.11) ರಾತ್ರಿ ಮತ್ತೆ ಇಸ್ರೇಲ್ ವಿರೋಧಿ ಹಿಂಸಾಚಾರ ನಡೆದಿದೆ. ಕಳೆದ ವಾರದ ಹಿಂಸಾಚಾರ ಸಂಬಂಧ ಡಚ್ ಪೊಲೀಸರು ಮತ್ತೆ ಐವರನ್ನು ಬಂಧಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಕಳೆದ ವಾರ ಆಮ್‌ಸ್ಟರ್‌ಡ್ಯಾಮ್​ನಲ್ಲಿ ನಡೆದ ಯುರೋಪಾ ಲೀಗ್ ಫುಟ್‍ಬಾಲ್ ಟೂರ್ನಿಯಲ್ಲಿ ಸ್ಥಳೀಯ ಅಜಾಕ್ಸ್ ಕ್ಲಬ್ ಹಾಗೂ ಇಸ್ರೇಲ್‍ನ ಮಕಾಬಿ ಕ್ಲಬ್ ನಡುವಿನ ಪಂದ್ಯದ ಬಳಿಕ ಇಸ್ರೇಲ್ ತಂಡದ ಆಟಗಾರರು ಹಾಗೂ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಸೋಮವಾರ ತಡರಾತ್ರಿ ನಡೆದ ಹಿಂಸಾಚಾರ ಈ ಘಟನೆಯ ಮುಂದುವರಿದ ಭಾಗವಾಗಿದೆ.

ವರದಿಗಳ ಪ್ರಕಾರ, ಕಪ್ಪು ಬಟ್ಟೆ ಧರಿಸಿದ್ದ ಜನರ ಗುಂಪೊಂದು ಸ್ಫೋಟಕಗಳನ್ನು ಸಿಡಿಸಿ ನಗರದಲ್ಲಿನ ಜನಪ್ರಿಯ ಟ್ರಾಮ್‍ಗೆ ಬೆಂಕಿ ಹಚ್ಚಿದ್ದಾರೆ. ಆದರೆ, ಟ್ರಾಮ್‍ನಲ್ಲಿ ಯಾರೂ ಇರದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹಿಂಸಾಚಾರ ನಡೆಸಿದವರು ‘ಫ್ರೀ ಪ್ಯಾಲೆಸ್ತೀನ್’ ಘೋಷಣೆ ಕೂಗುತ್ತಿದ್ದರು ಎಂದು ವರದಿಯಾಗಿದೆ.

ಕಳೆದ ವಾರ ಇಸ್ರೇಲಿ ಆಟಗಾರರು ಹಾಗೂ ತಂಡದ ಬೆಂಬಲಿಗರ ಮೇಲೆ ನಡೆದ ದಾಳಿಯಲ್ಲಿ ಐದು ಮಂದಿ ಗಾಯಗೊಂಡಿದ್ದರು. ದಾಳಿಯ ಬಳಿಕ ವಿಶೇಷ ವಿಮಾನದಲ್ಲಿ ಆಟಗಾರರು ಹಾಗೂ ಬೆಂಬಲಿಗರನ್ನು ಇಸ್ರೇಲ್ ಸ್ವದೇಶಕ್ಕೆ ಕರೆಸಿಕೊಂಡಿತ್ತು.

ಈ ಮಧ್ಯೆ, ಇಸ್ರೇಲ್ ಫುಟ್‍ಬಾಲ್ ತಂಡದ ಅಭಿಮಾನಿಗಳು ಕಳೆದ ಬುಧವಾರ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಟ್ಯಾಕ್ಸಿಯೊಂದಕ್ಕೆ ದಾಳಿ ನಡೆಸಿದ್ದರಲ್ಲದೆ, ಪ್ಯಾಲೆಸ್ತೀನ್ ಧ್ವಜವನ್ನು ಸುಟ್ಟು ಹಾಕಿದ್ದರು. ಮರುದಿನ ಪಂದ್ಯ ನಡೆಯುತ್ತಿದ್ದಾಗಲೂ ಇಸ್ರೇಲ್ ತಂಡದ ಅಭಿಮಾನಿಗಳು ಅರಬ್ ವಿರೋಧಿ ಘೋಷಣೆ ಕೂಗುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ರಾಯ್ಟರ್ಸ್ ವರದಿ ಮಾಡಿತ್ತು.

“ಇಸ್ರೇಲಿಗರು, ವಿಶೇಷವಾಗಿ ಯಹೂದಿಗಳ ಮೇಲಿನ ದಾಳಿಗಳು ಆಘಾತಕಾರಿ ಮತ್ತು ಖಂಡನೀಯ’ ಎಂದು ನೆದರ್ಲ್ಯಾಂಡ್ ಪ್ರಧಾನಮಂತ್ರಿ ಡಿಕ್ ಸ್ಕೂಫ್ ಸೋಮವಾರ ಹೇಳಿದ್ದಾರೆ.

ಆಮ್‌ಸ್ಟರ್‌ಡ್ಯಾಮ್​ನಲ್ಲಿ ಗುರುವಾರ (ನ.14) ದವರೆಗೆ ಪ್ರತಿಭಟನೆ ನಡೆಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಆದರೂ, ಪ್ಯಾಲೆಸ್ತೀನ್ ಪರವಾದ ಪ್ರತಿಭಟನೆಗಳನ್ನು ನಗರ ಕೇಂದ್ರದಿಂದ ದೂರದಲ್ಲಿರುವ ಉದ್ಯಾನವನದಲ್ಲಿ ಮುಂದುವರಿಸಲು ಅನುಮತಿಸಲಾಗಿದೆ. ಪ್ರತಿಭಟನಾಕಾರರು ಆಮ್‌ಸ್ಟರ್‌ಡ್ಯಾಮ್ ಸಿಟಿ ಹಾಲ್ ಹೊರಗೆ ಪ್ರತಿಭಟಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ‘ಶಿಬಿರ ತೊರೆಯದಿರಿ’ | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....