Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...