Homeಮುಖಪುಟಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ...

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

- Advertisement -
- Advertisement -

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ.

ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ ₹2,117 ಕೊಟ್ಟು ಖರೀದಿ ಮಾಡಿದೆ ಎಂಬ ಸ್ಪೋಟಕ ಸತ್ಯ ಹೊರಬಿದ್ದಿದೆ.

ತಮ್ಮ ವೈಯಕ್ತಿಕ ಲಾಭ ಹಾಗೂ ಚೀನಾ ಮೂಲದ ಕಂಪನಿಗಳ ಲಾಭಕ್ಕಾಗಿ ಅಂದಿನ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಆರ್ಥಿಕ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾಹಿತಿ ಕಳೆದ ವಾರ ಬಹಿರಂಗವಾಗಿತ್ತು. ಇದೀಗ, ಬಿಜೆಪಿ ಸರ್ಕಾರ, ಬರೋಬ್ಬರಿ 1.2 ಲಕ್ಷ ಜನರ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ತನಿಖಾ ವರದಿಯಿಂದ ಬಹಿರಂಗವಾಗಿದೆ.

ಕೇಂದ್ರ ಸರ್ಕಾರದ ಲೆಕ್ಕಪತ್ರ ಮತ್ತು ಅಂಕಿಅಂಶಗಳ ನಿರ್ದೇಶನಾಲಯವು ರಾಜ್ಯದಲ್ಲಿ 2020ರ ಜನವರಿಯಿಂದ ಜುಲೈವರೆಗೆ 2,69,029 ಹಾಗೂ 2021ರ ಜನವರಿಯಿಂದ ಜುಲೈವರೆಗೆ 4,26,943 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಅಂದರೆ, 2020ಕ್ಕಿಂತ 2021ರಲ್ಲಿ ಸಾವುಗಳ ಸಂಖ್ಯೆ 1,57,914ರಷ್ಟು ಹೆಚ್ಚಾಗಿದೆ. ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾವಿನ ಸಂಖ್ಯೆಗಳ ಅಂತರವು ಕೇವಲ 37,206 ಎಂದು ತಪ್ಪು ಮಾಹಿತಿ ನೀಡಿದೆ. ಆ ಮೂಲಕ, ಸುಮಾರು 1,20,708 ಸಾವುಗಳ ಮಾಹಿತಿಯನ್ನೇ ಮುಚ್ಚಿಟ್ಟಿದೆ. ತಪ್ಪು ಮಾಹಿತಿ ನೀಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳು ಘೋರ ಅಪರಾಧ ಎಸಗಿದ್ದಾರೆ ಎಂದು ತನಿಖಾ ಆಯೋಗ ಹೇಳಿದೆ.

ಕೋವಿಡ್ ಹಗರಣದ ಸಂಬಂಧ ಕುನ್ಹಾ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ, “ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವಧಿಯಲ್ಲಿ ಸರ್ಕಾರವು ಕೊರೋನ ಟೆಸ್ಟ್‌ಗಾಗಿ ಖಾಸಗಿ ಲ್ಯಾಬ್‌ಗಳಿಗೆ ₹6.93 ಕೋಟಿ ಕೊಟ್ಟಿದೆ. ಆದರೆ, ಅವುಗಳ ಪೈಕಿ 14 ಲ್ಯಾಬ್‌ಗಳು ಐಸಿಎಂಆರ್​ನಿಂದ ಮ್ಯಾನತೆಯನ್ನೇ ಪಡೆದಿಲ್ಲ. ಅವುಗಳು ಟಿಪಿಸಿಆರ್‌ (TPCR) ಟೆಸ್ಟ್​ಗೆ ಆ ಲ್ಯಾಬ್‌ಗಳ ಸಾಮರ್ಥ್ಯ ಮತ್ತು ಕ್ಷಮತೆ ಗುರುತಿಸಲಾಗಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್‌ಗಳಿಗೆ ಕೊರೋನ ಪರೀಕ್ಷೆಗೆ ಅನುಮತಿ ನೀಡಿ, ಹಣ ಸಂದಾಯ ಮಾಡಲಾಗಿದೆ. ಅಲ್ಲದೆ, 8 ಲ್ಯಾಬ್‌ಗಳಿಗೆ ಅನುಮತಿ ಪಡೆಯದೆ ₹4.28 ಕೋಟಿ ಸಂದಾಯ ಮಾಡಲಾಗಿದೆ” ಎಂದು ಹೇಳಿದೆ.

ಮತ್ತೊಂದೆಡೆ, ಕೋವಿಡ್ ಜಾಹೀರಾತುವಿನಲ್ಲಿಯೂ ಅಕ್ರಮ ನಡೆದಿದೆ ಎಂದು ವರದಿ ಹೇಳಿದೆ. “ಕೋವಿಡ್‌ ಕುರಿತ ಮಾಹಿತಿ ಮತ್ತು ಪ್ರಚಾರಕ್ಕಾಗಿ ಇಟ್ಟಿದ್ದ ₹7.3 ಕೋಟಿ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿವೆ. ಬಿಎಂಟಿಸಿ ಮಾನ್ಯೇಜಿಂಗ್ ಡೈರೆಕ್ಟರ್‌ (ಎಂಡಿ) ಸಲಹೆ ಮೇರೆಗೆ ಯಾವುದೇ ಅನುಮತಿ ಪಡೆಯದೆ, ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ ₹8.85 ಲಕ್ಷ ಹಣವನ್ನು ನಿಯಮ ಬಾಹಿರವಾಗಿ ಪಾವತಿ ಮಾಡಲಾಗಿದೆ. ಪ್ರಚಾರದ ಹಣದಲ್ಲಿ ₹5 ಕೋಟಿ ಹಣಕ್ಕೆ ಯಾವುದೇ ದಾಖಲೆಗಳನ್ನು ಇಲಾಖೆ ಒದಗಿಸಿಲ್ಲ” ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

“ಕೋವಿಡ್‌ ಆಪ್ತಮಿತ್ರ ಸೇವೆಯಲ್ಲಿಯೂ ಗೋಲ್‌ಮಾಲ್ ನಡೆದಿದೆ. ಈ ಸೇವೆಗಾಗಿ ಸುಮಾರು ₹5 ಕೋಟಿ ಹಣ ನಿಗದಿ ಮಾಡಲಾಗಿತ್ತು. ಆಪ್ತಮಿತ್ರ ಸೇವೆ ಒದಗಿಸಲು ಎರಡು ಬಿಪಿಓ ಸಂಸ್ಥೆಗಳಿಗೆ ₹4.9 ಕೋಟಿ ಹಣ ಸಂದಾಯ ಮಾಡಲಾಗಿದೆ” ಎಂಬುದನ್ನು ತನಿಖಾ ಆಯೋಗ ಗಮನಿಸಿದೆ.

“ಈ ಎರಡೂ ಬಿಪಿಓ ಸೇವಾ ಸಂಸ್ಥೆಗಳಿಗೆ ಯಾವುದೇ ಅಗ್ರಿಮೆಂಟ್ ಇಲ್ಲದೆ ಕೆಲಸ ಮಾಡಲಾಗಿದೆ. ಕೆಲಸ ನೀಡಿದ್ದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಬಳಿ ಯಾವುದೇ ಸೂಕ್ತ ದಾಖಲೆಗಳಿಲ್ಲ. ಬಿಪಿಓ ಸಂಸ್ಥೆಗಳಿಗೆ ಹಣ ಪಾವತಿ ಮಾಡಿರುವ ಫೈಲ್‌ ಅನ್ನು ತನಿಖಾ ಆಯೋಗಕ್ಕೆ ಇಲಾಖೆ ಒದಗಿಸಿಲ್ಲ. ಹೀಗಾಗಿ, ಆ ಬಿಪಿಓ ಸಂಸ್ಥೆಗೆ ನೀಡಿರುವ ಹಣವನ್ನ ವಾಪಸ್ ಪಡೆಯಬೇಕು” ಎಂದು ತನಿಖಾ ಆಯೋಗ ಶಿಫಾರಸ್ಸು ಮಾಡಿದೆ.

ಇದನ್ನೂ ಓದಿ; ಕೋವಿಡ್ ತನಿಖೆ ಕುರಿತು ಹೇಳಿಕೆ; ಪ್ರಲ್ಹಾದ್ ಜೋಶಿ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...