Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...