Homeಚಳವಳಿ10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

10 ಜನರ ಗುಂಡಿಕ್ಕಿ ಹತ್ಯೆ | ಮಣಿಪುರದ ಗುಡ್ಡಗಾಡು ಪ್ರದೇಶ ಸಂಪೂರ್ಣ ಬಂದ್

- Advertisement -
- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳು ಮಂಗಳವಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಶಾಲಾ-ಕಾಲೇಜುಗಳು, ಮಾರುಕಟ್ಟೆಗಳು ಬಂದಾಗಿವೆ. ಬಂದ್ ಪರಿಣಾಮ ವಾಹನ ಸಂಚಾರ ಕೂಡಾ ಸ್ಥಗಿತಗೊಂಡಿದೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ. ಸೋಮವಾರ ರಾಜ್ಯದ ಜಿರಿಬಾಮ್‌ನಲ್ಲಿ ಸೇನೆಯಿಂದ ಹತ್ಯೆಗೊಳಗಾದ 10 ಜನರಿಗೆ ಸಾಮೂಹಿಕ ಶ್ರದ್ಧಾಂಜಲಿ ಮತ್ತು ಬೆಂಬಲ ವ್ಯಕ್ತಪಡಿಸಿ ಕುಕಿ-ಜೊ ಕೌನ್ಸಿಲ್ 13 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ಈ ಬಂದ್ ಅನ್ನು ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಯಿತು. 10 ಜನರ

ಆದರೆ ಮಣಿಪುರ ಪೊಲೀಸರು, “ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಈ ಭೀಕರ ಗುಂಡಿನ ಚಕಮಕಿಯಲ್ಲಿ 10 ಶಂಕಿತ ಉಗ್ರರು ಹತರಾಗಿದ್ದಾರೆ” ಎಂದು ಹೇಳಿದ್ದರು. ಪೊಲೀಸರ ಈ ಪ್ರತಿಪಾದನೆಯನ್ನು ಕುಕಿ-ಜೊ ಕೌನ್ಸಿಲ್ ನಿರಾಕರಿಸಿದ್ದು, ಅವರು ‘ಗ್ರಾಮ ಸ್ವಯಂ ಸೇವಕ’ರಾಗಿದ್ದು, ಅವರನ್ನು ಸೇನೆಯು ಹೊಂಚು ಹಾಕಿ ಕೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 10 ಜನರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂದ್ ಸಮಯದಲ್ಲಿ ಕುಕಿ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಮುಚ್ಚಲ್ಪಟ್ಟಿದ್ದು, ಹೆಚ್ಚಿನ ಸ್ಥಳಗಳಲ್ಲಿ ಮಾರುಕಟ್ಟೆಗಳು ಮತ್ತು ಅಂಗಡಿಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ವಾಹನಗಳು ಕೂಡಾ ರಸ್ತೆಗಿಳಿಯಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಲವು ಕುಕಿ-ಜೋ ಸಂಘಟನೆಗಳು ಕೇಂದ್ರದ ಪಡೆಗಳನ್ನು ಗುರಿಯಾಗಿಸಿ, ಜಿರಿಬಾಮ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿವೆ.

ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) “…ಯಾವುದೇ ಸಿಆರ್‌ಪಿಎಫ್ ಸಿಬ್ಬಂದಿ ತಮ್ಮ ಶಿಬಿರದ ಆವರಣದಿಂದ ಹೊರಹೋಗಲು ಅನುಮತಿಸುವುದಿಲ್ಲ. ಈ ಸೂಚನೆಯನ್ನು ಉಲ್ಲಂಘಿಸಿದರೆ ಏನಾದರೂ ನಡೆದರೆ ಅದಕ್ಕೆ ಸಿಆರ್‌ಪಿಎಫ್ ಸಿಬ್ಬಂದಿಯೆ ಹೊಣೆ” ಎಂದು ಎಚ್ಚರಿಸಿದೆ.

“ಈ ಸೂಚನೆಯನ್ನು ನೀಡಿದ ತಕ್ಷಣ ಈ ನಿರ್ದೇಶನ ಜಾರಿಯಲ್ಲಿರುತ್ತದೆ. ಅಲ್ಲದೆ, ಸಿಆರ್‌ಪಿಎಫ್ ಜಿರಿಬಾಮ್‌ನಲ್ಲಿ ನಡೆಸಿದ ಅನಾಗರಿಕ ಕೃತ್ಯಗಳನ್ನು ಸಾರ್ವಜನಿಕವಾಗಿ ಅಂಗೀಕರಿಸುವ ವರೆಗೆ ಮತ್ತು ಕ್ಷಮೆಯಾಚಿಸುವವರೆಗೆ ಇದು ಜಾರಿಯಲ್ಲಿರುತ್ತದೆ. ಕುಕಿ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಿಆರ್‌ಪಿಎಫ್ ವಿರುದ್ಧ ಇದನ್ನು ದೊಡ್ಡ ಅಸಹಕಾರ ಚಳುವಳಿಯ ಭಾಗವಾಗಿ ಮಾಡಲಾಗುತ್ತದೆ. ಇದನ್ನು ಮುಂದಿನ ಸೂಚನೆಯವರೆಗೂ ಅನುಸರಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗುವುದು” ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.

ಝೋಮಿ ಸ್ಟೂಡೆಂಟ್ಸ್ ಫೆಡರೇಶನ್ (ZSF) ಗುಂಡಿನ ಚಕಮಕಿಯ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿದೆ. “ಜಿರಿಬಾಮ್‌ನಲ್ಲಿ ನಿನ್ನೆ ಅಂದರೆ 11-11-2024 ರಂದು ನಮ್ಮ ಹನ್ನೊಂದು ಯುವಕರನ್ನು ವಿಶ್ವಾಸಘಾತುಕವಾಗಿ ಹತ್ಯೆಗೈದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಅಮಾನವೀಯ ಕ್ರಮಗಳ ಹಿನ್ನಲೆಯಲ್ಲಿ, ತಕ್ಷಣವೇ ಜಾರಿಗೆ ಬರುವಂತೆ ನಾವು CRPF ಅನ್ನು ಸಾಮಾಜಿಕ ಬಹಿಷ್ಕಾರ ಮಾಡಿದ್ದೇವೆ ಎಂದು ಘೋಷಿಸುತ್ತೇವೆ.” ಅದು ಹೇಳಿದೆ.

ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಎಚ್‌ಮಾರ್ ವಿದ್ಯಾರ್ಥಿಗಳ ಸಂಘ (ಎಚ್‌ಎಸ್‌ಎ) ಆಗ್ರಹಿಸಿದೆ. “ಜಖ್ರಾದವರ್‌ನಲ್ಲಿ ನಡೆದ ಹತ್ಯೆಗಳು ಮತ್ತು ಜೈರಾನ್ ಮೇಲಿನ ದಾಳಿಯ ಬಗ್ಗೆ ತಕ್ಷಣವೆ ಮತ್ತು ನಿಷ್ಪಕ್ಷಪಾತವಾದ ಸಿಬಿಐ ನೇತೃತ್ವದ ತನಿಖೆಯನ್ನು ನಾವು ಒತ್ತಾಯಿಸುತ್ತೇವೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ವಿಶ್ವಾಸಾರ್ಹ, ತಟಸ್ಥ ಭದ್ರತಾ ಕ್ರಮಗಳು ಜಾರಿಯಾಗುವವರೆಗೆ ಕುಕಿ-ಜೋ ಸಮುದಾಯಗಳು ವಾಸಿಸುವ ಪ್ರದೇಶಗಳಿಂದ CRPF ಮತ್ತು ಮಣಿಪುರ ಪೊಲೀಸ್ ಪಡೆಗಳನ್ನು ತಕ್ಷಣವೇ ಹಿಂಪಡೆಯಲು HSA ಆಗ್ರಹಿಸಿದೆ.

ಜಿರಿಬಾಮ್‌ನಲ್ಲಿ ನಡೆದ ದಾಳಿಯ ನಂತರ ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳಲ್ಲಿ ವಾಸಿಸುವ ಕುಕಿ-ಜೋ ಬುಡಕಟ್ಟು ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...