Homeಕರ್ನಾಟಕಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್‌.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.

“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ

“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.

“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ

“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...