Homeಫ್ಯಾಕ್ಟ್‌ಚೆಕ್FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ...

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

- Advertisement -
- Advertisement -

ಹಿಂದೂ ಸಾಧುಗಳ ರೀತಿ ವಸ್ತ್ರ ಧರಿಸಿ, ಹಣೆ ಮೇಲೆ ವಿಭೂತಿ ಹಚ್ಚಿರುವ ಮೂವರು ಗಡ್ಡದಾರಿ ವ್ಯಕ್ತಿಗಳ ಜೊತೆ ಜನರ ಗುಂಪೊಂದು ವಾಗ್ವಾದ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ‘ಮೂವರು ಸಾಧುಗಳನ್ನು ವ್ಯಕ್ತಿಯೊಬ್ಬ”ನಿಮಗೆ ಎಷ್ಟು ದೇವರ ನಾಮಗಳು ಗೊತ್ತಿದೆ?” ಎಂದು ಪ್ರಶ್ನಿಸುವುದು ಮತ್ತು ಇತರ ವ್ಯಕ್ತಿಗಳಿಗೆ ” ಇವರು ನಿಜವಾದ ಸಾಧುಗಳಲ್ಲ, ಸಾಧುಗಳ ವೇಷ ಧರಿಸಿರುವ ಮುಸ್ಲಿಮರು. ಇವರಲ್ಲಿ ಒಬ್ಬಾತನ ಹೆಸರು ಸಲ್ಮಾನ್ ” ಎಂದು ಹೇಳುತ್ತಿರುವುದು ಇದೆ.

ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರು, “ಹಿಂದೂ ಸಾಧುಗಳ ವೇಷ ಧರಿಸಿದ್ದ ಓಡಾಡುತ್ತಿದ್ದ ಮುಸ್ಲಿಮರು ಸಿಕ್ಕಿ ಬಿದ್ದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ನವೆಂಬರ್ 2ರಂದು ಈ ವೈರಲ್ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಗುಜರಾತ್ ಭಾಷೆಯ ಸುದ್ದಿವಾಹಿನಿ ಝೀ 24 ಕಾಲಕ್‘ “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದ! ಸೂರತ್‌ನಲ್ಲಿ ಸಾಧುಗಳಂತೆ ಭಿಕ್ಷೆ ಬೇಡುತ್ತಿದ್ದವರ ವಂಚನೆ ಐಡಿ ಪರಿಶೀಲಿಸಿದಾಗ ಬಹಿರಂಗಗೊಂಡಿದೆ” ಎಂದು ಬರೆದುಕೊಂಡಿತ್ತು. ಈಗಲೂ

ಬಲಪಂಥೀಯ ಸುದ್ದಿ ಸಂಸ್ಥೆ ‘ಓಪ್‌ ಇಂಡಿಯಾ‘ ಕೂಡ ನವೆಂಬರ್ 24ರಂದು ವೈರಲ್ ವಿಡಿಯೋ ಹಂಚಿಕೊಂಡು “ಸಲ್ಮಾನ್ ಮತ್ತು ಆತನ ಸಹಚರರು ಕೇಸರಿ ಬಟ್ಟೆ ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕ ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರು ಸರಿಯಾಗಿ ಹೇಳಲು ಸಾಧ್ಯವಾಗಿಲ್ಲ” ಎಂದು ಬರೆದುಕೊಂಡಿತ್ತು.

ಮತ್ತೊಂದು ಬಲಪಂಥೀಯ ಸುದ್ದಿ ಸಂಸ್ಥೆ ಸುದರ್ಶನ್ ನ್ಯೂಸ್ ಕೂಡ ನವೆಂಬರ್ 4ರಂದು ವೈರಲ್ ವಿಡಿಯೋ ಹಂಚಿಕೊಂಡು “ಗುಜರಾತ್‌ನ ಸೂರತ್‌ನಲ್ಲಿ, ‘ಜಿಹಾದಿ’ ಸಲ್ಮಾನ್ ಮತ್ತು ಆತನ ಗ್ಯಾಂಗ್ ಸಾಧುಗಳಂತೆ ಪೋಸು ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು… ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಡುತ್ತಿದ್ದ ಮೂವರು ‘ಜಿಹಾದಿ’ಗಳನ್ನು ಬಂಧಿಸಲಾಗಿದೆ” ಎಂದು ಬರೆದುಕೊಂಡಿತ್ತು.

ನವೆಂಬರ್ 4ರಂದು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದ ಆರ್‌ಎಸ್‌ಎಸ್‌ ಮುಖವಾಣಿ ಪಾಂಚಜನ್ಯ “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಲು ಬಯಸಿದರೆ, ಏಕೆ ಹಿಂದೂ ಆಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ, ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3,2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿತ್ತು.

ಇನ್ನೂ ಅನೇಕ ಬಲಪಂಥೀಯ ಸುದ್ದಿ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ, ಫೋಟೋ ಹಂಚಿಕೊಂಡು ಮುಸ್ಲಿಮರು ಹಿಂದೂ ಸಾಧುಗಳ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಈ ಬಗ್ಗೆ ವರದಿಗಳನ್ನು ಹುಡುಕಿದ್ದೇವೆ. ಈ ವೇಳೆ ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ನವೆಂಬರ್ 4ರಂದು ವಿಡಿಯೋ ಕುರಿತು ಪ್ರಕಟಿಸಿದ ವರದಿ ಲಭ್ಯವಾಗಿದೆ. ಅದರಲ್ಲಿ “ಪೊಲೀಸ್ ತನಿಖೆಯ ನಂತರ ವಿಡಿಯೋದಲ್ಲಿರುವ ಮೂವರೂ ಸಾಧುಗಳು ಹಿಂದೂಗಳು ಮತ್ತು ಅವರು ಜುನಾಗಢದಿಂದ ಬಂದವರು ಎಂದು ತಿಳಿದು ಬಂದಿದೆ” ಎಂಬುವುದಾಗಿ ಹೇಳಿದೆ.

“ಮೂವರು ಸಾಧುಗಳು ಅನುಮಾನಾಸ್ಪದವಾಗಿ ಕಂಡು ಬಂದಿದ್ದರು. ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅವರು ನೀಡಿದ ಮಾಹಿತಿ ಆಧರಿಸಿ ಜುನಾಗಢದಲ್ಲೂ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ನೀಡಿರುವ ಮಾಹಿತಿ ಸರಿಯಾಗಿರುವುದು ಗೊತ್ತಾಗಿದೆ. ಮೂವರು ಸಾಧುಗಳಲ್ಲಿ ಒಬ್ಬರ ಹೆಸರು ‘ಸಲ್ಮಾನಾಥ್’. ಇದನ್ನು ಜನರು ಸಲ್ಮಾನ್ ಎಂದು ತಪ್ಪು ತಿಳಿದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು” ದಿವ್ಯಾ ಭಾಸ್ಕರ್ ವರದಿ ವಿವರಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ‘ಸಲ್ಮಾನಾಥ್’ ಅವರ ಚುನಾವಣಾ ಗುರುತಿನ ಚೀಟಿಯನ್ನು ಹಂಚಿಕೊಂಡಿದೆ. ಅದರಲ್ಲಿ ಸಲ್ಮಾನಾಥ್ ಅವರ ತಂದೆ ಸೂರಮನಾಥ್ ಪರ್ಮಾರ್ ಎಂದು ಇದೆ. ಪರ್ಮಾರ್ ಎಂಬ ಉಪನಾಮವು ರಜಪೂತ ಸಮುದಾಯಕ್ಕೆ ಸಂಬಂಧಿಸಿದೆ. ಇವರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಲ್ಲಿ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಲ್ಲಿ ನೆಲೆಗೊಂಡಿದ್ದಾರೆ.

pc : altnews.in

ಸಾಧುಗಳನ್ನು, ವಿಶೇಷವಾಗಿ ಮನೆಯಿಂದ ಮನೆಗೆ ತೆರಳಿ ಭಿಕ್ಷೆ ಬೇಡುವವರಿಗೆ ಮುಸ್ಲಿಮರು ಎಂದು ಆಧಾರರಹಿತ ಅನುಮಾನದ ಮೇಲೆ ಕಿರುಕುಳ ನೀಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜುಲೈನಲ್ಲಿ ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಗಿತ್ತು. ಅಲೆದಾಡುವ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಇತರ ನಿದರ್ಶನಗಳೂ ಇವೆ.

ಇದನ್ನೂ ಓದಿ | FACT CHECK : ಅಪಘಾತದ ವಿಡಿಯೋಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...