Homeಮುಖಪುಟಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

ಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲನ್ನು ಮುಟ್ಟಿ ನಮಿಸಲು ಪ್ರಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗಿದ್ದು, ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸುತ್ತಿರುವುದು ಈ ವರ್ಷದಲ್ಲಿ ಇದು ಮೂರನೇ ಬಾರಿಯಾಗಿದೆ. ಮತ್ತೆ ಮೋದಿಯ ಕಾಲು

ನಿತೀಶ್ ಕುಮಾರ್ ಅವರು ತನ್ನ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ. ಇದೇ ಕಾರ್ಯಕ್ರಮದ ಮತ್ತೊಂದು ವಿಡಿಯೊ ಕೂಡಾ ವೈರಲ್ ಆಗಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಹಾರ ಹಾಕುತ್ತಿರುವ ವೇಳೆ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾರೆ. ಮತ್ತೆ ಮೋದಿಯ ಕಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್‌ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ, ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲು ಅವರ ಪಕ್ಷವು ಬೆಂಬಲ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿ, ಬಹುಮತದ ಗಡಿ ದಾಟಲು ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯನ್ನು ಅವಲಂಬಿಸಿದೆ.

ಬಿಹಾರವನ್ನು ‘ಜಂಗಲ್ ರಾಜ್‌’ನಿಂದ ಹೊರತಂದ ನಿತೀಶ್ ಕುಮಾರ್: ಮೋದಿ

ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಏಮ್ಸ್‌ಗೆ ಅಡಿಪಾಯ ಹಾಕಿದ್ದು, ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು ರಾಜ್ಯವನ್ನು ಪರಿವರ್ತನೆ ಮಾಡಿದ್ದು, ರಾಜ್ಯವನ್ನು ‘ಜಂಗಲ್ ರಾಜ್’ನಿಂದ ಹೊರತಂದಿದ್ದಾರೆ” ಎಂದು ಶ್ಲಾಘಿಸಿ, ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್‌ಡಿಎ ಆಡಳಿತದಲ್ಲಿ ಬಿಹಾರದ ಆರೋಗ್ಯ ಮೂಲಸೌಕರ್ಯದಲ್ಲಿನ ಸುಧಾರಣೆಗಳನ್ನೂ ಪ್ರಧಾನಮಂತ್ರಿ ಎತ್ತಿ ತೋರಿಸಿದ್ದಾರೆ. “ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡುತ್ತಿದ್ದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...