Homeಮುಖಪುಟ'ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!' | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ...

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

- Advertisement -
- Advertisement -

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ

ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸ್ಥಾಯಿ ಸಮಿತಿ ಮುಂದೆ ವರದಿಯನ್ನು ಮಂಡಿಸಿದ್ದು, ಅವರು ಮೇ 2023 ರಲ್ಲಿ ಮಣಿಪುರದ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಗಳ ಸಂಖ್ಯೆಯನ್ನು ಉಲ್ಲೇಖಿಸಲು ವಿಫಲರಾಗಿದ್ದಾರೆ. ಈ ವರೆಗೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 237 ಜನರನ್ನು ಕೊಲ್ಲಲ್ಪಟ್ಟಿದ್ದು, ಸುಮಾರು 59,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದಾರೆ. ಈಶಾನ್ಯ ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2014 ರಿಂದ ಈಶಾನ್ಯದಲ್ಲಿ ನಾಗರಿಕ ಹತ್ಯೆಗಳಲ್ಲಿ 82% ಕಡಿಮೆಯಾಗಿದೆ, 212 ಸಾವುಗಳು ದಾಖಲಾಗಿವೆ ಎಂದು ಮೋಹನ್ ತಮ್ಮ ಪ್ರಸ್ತುತಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಪ್ರಸ್ತುತಿಯನ್ನು ಪ್ರತಿಪಕ್ಷದ ಸಂಸದರು ತೀವ್ರವಾಗಿ ಟೀಕಿಸಿದ್ದಾರೆ. ಸ್ಥಾಯಿ ಸಮಿತಿಯ ಭಾಗವಾಗಿರುವ ಸಂಸದರೊಬ್ಬರು ಮಾತನಾಡಿ, “ಇದು ಲಜ್ಜೆಗೆಟ್ಟ ಲೋಪವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರದ ಬಗ್ಗೆ ಮಾತನಾಡದೆ ಗೃಹ ಸಚಿವಾಲಯವು ಈಶಾನ್ಯ ಭಾರತದ ಬಗ್ಗೆ ಹೇಗೆ ಹೇಳುತ್ತದೆ? ಎಂದು ಅವರು ಕೇಳಿದ್ದಾರೆ.

“ಈಶಾನ್ಯ ಭಾರತದಲ್ಲಿ 2014ರಲ್ಲಿ 824 ಹಿಂಸಾಚಾರ ಘಟನೆಗಳು ನಡೆದಿದ್ದು, 2023 ರಲ್ಲಿ ಇದು 243 ಕ್ಕೆ ಅಂದರೆ 71% ರಷ್ಟು ಕಡಿಮೆಯಾಗಿದೆ” ಎಂದು ಗೃಹ ಸಚಿವಾಲಯವು ಹೇಳಿಕೊಂಡಿದೆ. ಜೊತೆಗೆ, ಭದ್ರತಾ ಸಿಬ್ಬಂದಿಯ ಸಾವಿನಲ್ಲಿ 60% ಇಳಿಕೆಯಾಗಿದೆ ಎಂದು ಅದು ಹೇಳಿದೆ. 2014 ರಲ್ಲಿ 20 ಸಿಬ್ಬಂದಿ ಸಾವಿಗೀಡಾಗಿದ್ದು, ಈ ಸಂಖ್ಯೆ 2023 ರಲ್ಲಿ 8 ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಮಹಿಳಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ಉಪಕ್ರಮಗಳು ಚರ್ಚೆಗೆ ಬಂದಾಗ, ವಿರೋಧ ಪಕ್ಷದ ಸಂಸದರು ಮಣಿಪುರದ ವಿಷಯಕ್ಕೆ ಸಂವಾದವನ್ನು ತಿರುಗಿಸಿದ್ದಾರೆ. ಕಳೆದ ವಾರವಷ್ಟೇ ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಹತ್ಯೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದರೊಬ್ಬರು ಸಭೆಯಲ್ಲಿ ಮಾತನಾಡಿದ್ದಾರೆ ದಿ ಹಿಂದೂ ವರದಿ ಮಾಡಿದೆ.

ನವೆಂಬರ್ 7 ರಂದು, ಜಿರಿಬಾಮ್ ಜಿಲ್ಲೆಯ ಝೈರೋನ್ ಹ್ಮಾರ್ ಗ್ರಾಮದಲ್ಲಿ ಝೋಸಾಂಗ್ಕಿಮ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಶಂಕಿತ ಮೈತೇಯಿ ಉಗ್ರಗಾಮಿಗಳು ಕೊಂದಿದ್ದರು ಎಂದು ವರದಿಯಾಗಿದೆ. ಮೃತರು ಹ್ಮಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಸ್ತ್ರಸಜ್ಜಿತ ಮೈತೇಯಿ ಗುಂಪಿನ ಅರಂಬೈ ತೆಂಗೋಲ್‌ನ ಸದಸ್ಯರು ಅವರನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗಿ ಎರಡು ದಿನಗಳ ನಂತರ, ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯದ ಮಹಿಳಾ ರೈತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತ ಮಹಿಳೆಯು ಇತರ ರೈತರೊಂದಿಗೆ ಸೈಟನ್ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಉಗ್ರರು ಬೆಟ್ಟದ ಕಡೆಯಿಂದ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...