Homeಮುಖಪುಟ'ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?' | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್...

‘ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?’ | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್ ಆಕ್ರೋಶ!

- Advertisement -
- Advertisement -

ದೆಹಲಿಯಲ್ಲಿರುವ ಸುಮಾರು 700 ವರ್ಷಗಳಷ್ಟು ಹಳೆಯ ಲೋಧಿ ಯುಗದ ಸಮಾಧಿಯನ್ನು ಆಕ್ರಮಿಸಿಕೊಂಡಿದ್ದಕ್ಕಾಗಿ ಡಿಫೆನ್ಸ್ ಕಾಲೋನಿ ವೆಲ್ಫೇರ್ ಅಸೋಸಿಯೇಷನ್ ​​(DCWA) ಅನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದ್ದು, ಸ್ಮಾರಕವನ್ನು ರಕ್ಷಿಸುವಲ್ಲಿ ವಿಫಲವಾದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಅನ್ನು ತರಾಟೆಗೆ ತೆಗೆದುಕೊಂಡಿದೆ. ಸ್ಮಾರಕಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಅಧ್ಯಯನ ಮಾಡಲು ಮತ್ತು ಅದರ ಮರುಸ್ಥಾಪನೆ ಕ್ರಮಗಳನ್ನು ಸೂಚಿಸಲು ಪುರಾತತ್ವ ತಜ್ಞರನ್ನು ನೇಮಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಕಾಲೊನಿ

ಸ್ಮಾರಕವು ಸಮಾಜ ವಿರೋಧಿ ಶಕ್ತಿಗಳಿಂದ ಹಾನಿಗೊಳಗಾಗುತ್ತದೆ ಎಂದು ಹೇಳುವ ಮೂಲಕ 1960 ರ ದಶಕದಲ್ಲಿ ಶೇಖ್ ಅಲಿಯ ಗುಮ್ಮಟವನ್ನು ಕಾಲೊನಿ ಅಸೋಸಿಯೇಷನ್ ಆಕ್ರಮಿಸಿಕೊಂಡಿತ್ತು. 15 ನೇ ಶತಮಾನದ ಈ ರಚನೆಯನ್ನು ಅಸೋಸಿಯೇಷನ್ ತನ್ನ ಕಚೇರಿಯಾಗಿ ಬಳಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ದೆಹಲಿ ಕಾಲೊನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುಮ್ಮಟವನ್ನು ಪ್ರವೇಶಿಸಲು ನಿಮಗೆ ಎಷ್ಟು ಧೈರ್ಯ ಇರಬೇಕು. ಯಾವ ರೀತಿಯ ವಾದಗಳನ್ನು ನೀವು ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಅಸೋಸಿಯೇಷನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಅಸೋಸಿಯೇಷನ್ ವಸಾಹತುಶಾಹಿ ಆಡಳಿತಗಾರರಂತೆ ಮಾತನಾಡುತ್ತಿದೆ ಎಂದು ನ್ಯಾಯಾಲಯ ಹೇಳಿದ್ದು, “ಅಸೋಸಿಯೇಷನ್ ಸ್ಥಳವನ್ನು ಆಕ್ರಮಿಸಿಕೊಂಡಿದ್ದಲ್ಲದೆ, ಎಸಿ ಅಳವಡಿಸಿದ ಕಚೇರಿಯಲ್ಲಿ ಕುಳಿತು ತನ್ನ ಆಡಳಿತವನ್ನು ನಡೆಸುತ್ತಿದೆ. ಅವರು ಬಾಡಿಗೆಯನ್ನು ಪಾವತಿಸುತ್ತಿದ್ದಾರೆಯೆ?” ನ್ಯಾಯಾಲಯ ಹೇಳಿದೆ.

ಅಸೋಸಿಯೇಷನ್‌ಗೆ ಸ್ಮಾರಕವನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ನ್ಯಾಯಾಲಯವು ಪುರಾತತ್ವ ಇಲಾಖೆಯನ್ನು ದೂಷಿಸಿದ್ದು, “ನೀವು (ಎಎಸ್‌ಐ) ಯಾವ ರೀತಿಯ ಪ್ರಾಧಿಕಾರ? ನಿಮಗೆ ಇರುವ ಕರ್ತವ್ಯವೇನು? ಪುರಾತನ ರಚನೆಗಳನ್ನು ರಕ್ಷಿಸುವ ನಿಮ್ಮ ಕರ್ತವ್ಯದಿಂದ ಹಿಂದೆ ಸರಿದಿದ್ದೀರಿ. ನಿಮ್ಮ ನಿಷ್ಕ್ರಿಯತೆಯನ್ನು ನೋಡಿ ನಾವು ವಿಚಲಿತರಾಗಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗುಮ್ಮಟದಿಂದ ಹೊರಹೋಗುವಂತೆ ಅಸೋಸಿಯೇಷನ್‌ಗೆ ನಿರ್ದೇಶನ ನೀಡುವುದಾಗಿ ನ್ಯಾಯಾಲಯವು ಹೇಳಿದ್ದು, 2025ರ ಜನವರಿ 21ರಂದು ವಿಚಾರಣೆಯನ್ನು ಮುಂದೂಡಿದೆ.

ಸಮಾಧಿಯನ್ನು 500 ವರ್ಷಗಳ ಹಿಂದೆ ಲೋದಿ ರಾಜವಂಶದ ಅವಧಿಯಲ್ಲಿ ನಿರ್ಮಿಸಲಾಗಿತ್ತು. ದೆಹಲಿಯ ಡಿಫೆನ್ಸ್ ಕಾಲೋನಿಯ ನಿವಾಸಿ ರಾಜೀವ್ ಸೂರಿ ಎಂಬುವರು ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಕಟುವಾದ ಟೀಕೆಗಳನ್ನು ಮಾಡಿದೆ. ಈ ರಚನೆಯನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ನಿರ್ದೇಶನಗಳನ್ನು ನೀಡಲು ದೆಹಲಿ ಹೈಕೋರ್ಟ್ 2019ರಲ್ಲಿ ನಿರಾಕರಿಸಿದ ನಂತರ ಸೂರಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...