Homeಕರ್ನಾಟಕಬಿಜೆಪಿಯಿಂದ ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ : ಸಿಎಂ ಸಿದ್ದರಾಮಯ್ಯ...

ಬಿಜೆಪಿಯಿಂದ ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಉರುಳಿಸಲು, ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಫರ್‌ ಅನ್ನು ಬಿಜೆಪಿ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ (ನ.13) ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣೆ ಮಾಡಿ ಮಾತನಾಡಿದ ಅವರು “ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಬಿಜೆಪಿಯವರು ಸಾಕಷ್ಟು ಭ್ರಷ್ಟಾಚಾರ ಮಾಡಿ ಲಂಚದಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡಿದ್ದಾರೆ. ಆ ಹಣದಿಂದ ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಲು ಯತ್ನಿಸಿದ್ದರು. ಆದರೆ, ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗಿಲ್ಲ. ಹಾಗಾಗಿ ನನ್ನ ಮೇಲೆ ಮುಡಾ ಪ್ರಕರಣ ಎಂದು ಸುಳ್ಳು ಆರೋಪ ಮಾಡಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂ.‌ಹಣ ಕೊಟ್ಟು ಖರೀದಿಸಲು ಯಡಿಯೂರಪ್ಪ ಏನು ಪ್ರಿಂಟ್ ಮಾಡಿದ್ದಾರಾ? ಬೊಮ್ಮಾಯಿ, ಅಶೋಕ್, ವಿಜಯೇಂದ್ರ ಹಣ ಪ್ರಿಂಟ್ ಮಾಡಿದ್ದಾರಾ? ಎಲ್ಲವೂ ಭ್ರಷ್ಟಾಚಾರ ಲಂಚದಿಂದ ಸಂಪಾದನೆ ಮಾಡಿರುವ ಹಣ” ಎಂದಿದ್ದಾರೆ.

“ಕೇಂದ್ರ ಸರ್ಕಾರ ಬಿಜೆಪಿ ಆಧಿಕಾರದಲ್ಲಿ ಇಲ್ಲದ ರಾಜ್ಯಗಳ ಮುಖ್ಯಮಂತ್ರಿಗಳ ಮೇಲೆ ಇಡಿ, ಐಟಿ, ಸಿಬಿಐ ಬಳಸಿಕೊಂಡು ತೊಂದರೆ ಕೊಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೂ ಸುಳ್ಳು ಪ್ರಕರಣ ಹಾಕಿ ತೊಂದರೆ ಕೊಟ್ಟರು.‌ ಈಗ ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಂಕರ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1.20 ಲಕ್ಷ ಕೋಟಿ ರೂ. ನೀಡಿದೆ.‌ ಇಂದು ನರಸೀಪುರದಲ್ಲಿ 470 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ” ಎಂದಿದ್ದಾರೆ. 

ಇದನ್ನೂ ಓದಿ : ಒಳ ಮೀಸಲಾತಿಗೆ ನ್ಯಾ. ನಾಗಮೋಹನ್‌ ದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...