Homeಎಕಾನಮಿಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ...

ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 6 ವರ್ಷದಲ್ಲಿ 90 ಲಕ್ಷ ಉದ್ಯೋಗ ಕುಸಿತ…

- Advertisement -
- Advertisement -

ಕೃಪೆ: ದಿ ಇಂಡಿಯನ್‌ ಎಕ್ಸ್‌ಪ್ರೆಸ್‌

ಅನುವಾದ: ವೆಂಕಟೇಶ್‌ ಮಾನು

2011-12 ಹಾಗೂ 2017-18 ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು ಉದ್ಯೋಗದ ಪ್ರಮಾಣ ಕುಗ್ಗಿರುವ ಬಗ್ಗೆ ಇತ್ತೀಚೆಗೆ ದೆಹಲಿಯ ಅಜೀಂ ಪ್ರೇಮಜಿ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಸಸ್ಟೆನೇಬಲ್ ಎಂಪ್ಲಾಯಿಮೆಂಟ್’ ಪ್ರಕಟಿಸಿರುವ ಹಾಗೂ ಸಂತೋಷ ಮೆಹ್ರೋತ್ರಾ ಮತ್ತು ಜಜಾತಿ ಕೆ. ಪರಿದಾ ಬರೆದಿರುವ ಪ್ರಬಂಧದಲ್ಲಿ ಅಭಿಪ್ರಾಯಪಡಲಾಗಿದೆ.

ಸ್ವಾತಂತ್ರ್ಯಾ ನಂತರದ ಭಾರತೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಯೋಗ ವಲಯ ಇಷ್ಟೊಂದು ಕುಸಿತ ಕಂಡಿದೆ. ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ಹಿಮಾಂಶು ಸೇರಿದಂತೆ ಈ ಪ್ರಬಂಧದ ಲೇಖಕರು ಹಾಗೂ ಇತರೆ ಪರಿಣಿತರು ಸಹ ಈ ರೀತಿಯ ಉದ್ಯೋಗ ಕುಸಿತದ ಪ್ರಮಾಣವನ್ನು ಕಂಡುಕೊಂಡಿದ್ದಾರೆ.

ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, “2011-12 ಹಾಗೂ 2017-18ರ ಅವಧಿಯಲ್ಲಿ 9 ದಶಲಕ್ಷ ಗಳಷ್ಟು (90 ಲಕ್ಷ) ಉದ್ಯೋಗದ ಪ್ರಮಾಣ ಕುಗ್ಗಿದೆ. ಇದು ಸ್ವಾತಂತ್ರ್ಯಾ ನಂತರದ ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ’ ಎಂದಿದ್ದಾರೆ.

ಮೆಹ್ರೋತ್ರಾ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿದ್ದರೆ, ಪರಿದಾ ಅವರು ಪಂಜಾಬ್‍ನ ಕೆಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕರು.

ಈ ಅಧ್ಯಯನದ ಫಲಿತಾಂಶವು, ಪ್ರಧಾನಿ ಅವರ ಅರ್ಥಶಾಸ್ತ್ರ ಸಲಹಾ ಸಮಿತಿಯಿಂದ ಲಾವೀಸ್ ಭಂಡಾರಿ ಹಾಗೂ ಅಮರೇಶ ದುಬೈ ನಡೆಸಿದ ಅಧ್ಯಯನಕ್ಕಿಂತ ಭಿನ್ನವಾಗಿದೆ. ಅವರ ಅಧ್ಯಯನದಂತೆ 2011-12 ಅವಧಿಯಲ್ಲಿ 43.3 ಕೋಟಿ ಇದ್ದ ಉದ್ಯೋಗಗಳು 2017-18ರ ಅವಧಿಯಲ್ಲಿ ಅದು 45.7 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಮೆಹ್ರೋತ್ರಾ ಹಾಗೂ ಪರಿದಾ ಪ್ರಕಾರ, 2011-12ರ ಅವಧಿಯಲ್ಲಿ 47.4 ಕೋಟಿ ಉದ್ಯೋಗಗಳಿದ್ದು  2017-18ರ ಅವಧಿಯಲ್ಲಿ ಅದು 46.5 ಕೋಟಿಗಿಳಿದಿವೆ. ಅಂದರೆ ಜನಸಂಖ್ಯೆ ಏರುತ್ತಲೇ ಇದ್ದರೆ ಮೊದಲ ಬಾರಿಗೆ ಉದ್ಯೋಗಗಳಲ್ಲಿ ಇಳಿಕೆ ಕಂಡುಬಂದಿದೆ.

ಆಗಸ್ಟ್ 1ರ  ಮಿಂಟ್ ಪತ್ರಿಕೆಯಲ್ಲಿ ಹಿಮಾಂಶು ಅಭಿಪ್ರಾಯಪಟ್ಟಿರುವಂತೆ “2011-12ರ ಅವಧಿಯಲ್ಲಿ 472.5 ದಶಲಕ್ಷ ದಷ್ಟು ಉದ್ಯೋಗ ಕುಸಿತ ಕಂಡು ಬಂದಿದೆ. ನಂತರದ 6 ವರ್ಷಗಳ ಅವಧಿಯಲ್ಲಿ 15 ದಶಲಕ್ಷ ಉದ್ಯೋಗಗಳು ಕುಂಠಿತಗೊಂಡಿವೆ. ಅಂದರೆ, 2011-12 ಹಾಗೂ 2017-18ರ ಅವಧಿಯ ಪ್ರತಿ ವರ್ಷದಲ್ಲೂ 26 ಲಕ್ಷದಷ್ಟು ಉದ್ಯೋಗಗಳು ನಷ್ಟ ಹೊಂದುತ್ತಾ ಬಂದಿವೆ.

ಈ ಎರಡೂ ಅಧ್ಯಯನಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿವೆ. 2004-05, 2011-12 ಹಾಗೂ ಪಿ.ಎಲ್.ಎಫ್.ಎಸ್-2017-18ರ ಅನ್ವಯ ಉದ್ಯೋಗ ಹಾಗೂ ನಿರುದ್ಯೋಗ ಸಮೀಕ್ಷೆಗಾಗಿ “ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗಾನೈಸೆಷನ್’ ನೀಡಿದ ಅಂಕಿ-ಅಂಶಗಳು ಈ ಎರಡೂ ಅಧ್ಯಯನಗಳಿಗೆ ಆಧಾರವಾಗಿವೆ. ಭಂಡಾರಿ ಹಾಗೂ ದುಬೈ ಪ್ರಕಾರ 40 ದಶಲಕ್ಷ ಉದ್ಯೋಗಗಳ ವ್ಯತ್ಯಾಸವಿದೆ. ಆದರೆ, ಮೆಹ್ರೋತ್ರಾ ಹಾಗೂ ಪರಿದಾ ಮತ್ತು ಹಿಮಾಂಶು ನಡೆಸಿದ ಅಧ್ಯಯನಗಳ ಫಲಿತಾಂಶಗಳು ಭಿನ್ನವಾಗಿವೆ.  ಏಕೆ ಹೀಗೆ ಎಂಬುದಕ್ಕೆ ಬಹುಶಃ ಎರಡು ಕಾರಣಗಳಿರಬಹುದು.

ಇಡೀ ದೇಶದ ಒಟ್ಟು ಜನಸಂಖ್ಯೆಯನ್ನು ಪರಿಗಣಿಸಿ ಒಟ್ಟು ಉದ್ಯೋಗಗಳ ಸಂಖ್ಯೆಯನ್ನು ಅಂದಾಜಿಸಿರಬಹುದು. ಅತಿ ಹೆಚ್ಚಿನ ಜನಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳ ಸಂಖ್ಯೆಯನ್ನು ನೀಡುತ್ತದೆ. ಭಂಡಾರಿ ಹಾಗೂ ದುಬೈ ಆವರು 2017-18ರಲ್ಲಿ ಭಾರತದ ಜನಸಂಖ್ಯೆಯನ್ನು 1.36 ಶತಕೋಟಿ ಎಂದು ಪರಿಗಣಿಸಿದ್ದಾರೆ. ಮೆಹ್ರೋತ್ರಾ ಹಾಗೂ ಪರಿದಾ ಅವರು 1.35 ಶತಕೋಟಿ ಎಂದು ಪರಿಗಣಿಸಿದ್ದಾರೆ. 2017-18ರಲ್ಲಿ ವಿಶ್ವಬ್ಯಾಂಕ್ 1.33 ಶತಕೋಟಿ ಎಂದಿದ್ದರೆ, ಹಿಮಾಂಶು-ಸರಕಾರಿ ಅಧಿಕಾರಿಗಳ ಜಿಡಿಪಿ ಅನ್ವಯ-1.31 ಶತಕೋಟಿ ಜನಸಂಖ್ಯೆ ಇದೆ ಎಂದು ಪರಿಗಣಿಸಿದೆ.

ಭಾರತದ ಜನಸಂಖ್ಯೆ ಬಗ್ಗೆ ಇಷ್ಟೊಂದು ಗೊಂದಲಗಳಿವೆ. ಏಕೆಂದರೆ, 2011ರ ಜನಗಣತಿ ಅನ್ವಯ ಇಂದಿಗೂ ಜನಸಂಖ್ಯೆ ಕುರಿತು ನಿಖರ ಮಾಹಿತಿ ನೀಡಿಲ್ಲ. ನಿಯಮದಂತೆ, ಸರ್ಕಾರವು 2016ರಲ್ಲಿಯೇ ಬಿಡುಗಡೆ ಮಾಡಬೇಕಿತ್ತು.

ಭಂಡಾರಿ ಹಾಗೂ ದುಬೈ ಅಧ್ಯಯನದಲ್ಲಿ, ಉದ್ಯೋಗಗಳ ಸಾಧ್ಯತೆಯ ಪ್ರಧಾನ ಮೂಲಾಂಶಗಳನ್ನು ಪರಿಗಣಿಸಿ, ನಂತರದ ಪೂರಕ ಸಾಧ್ಯತೆಗಳ ಮೂಲಗಳನ್ನು ಕಡೆಗಣಿಸಿರುವುದು ಈ ವ್ಯತ್ಯಾಸಗಳಿಗೆ ಕಾರಣ ಇರಬಹುದು. ಅದಲ್ಲದೇ ಅವರಿಬ್ಬರೂ ಪ್ರಧಾನಿ ಕಾರ್ಯಾಲಯದಲ್ಲಿ ಕೆಲಸ ಮಾಡುವುದರಿಂದ ಅಲ್ಲಿನ ಅಂಕಿ ಸಂಖ್ಯೆಗಳು ಉತ್ರೇಕ್ಷೆಯೂ ಇರಬಹುದೆಂಬ ಆರೋಪ ಸಹ ಕೇಳಿಬಂದಿದೆ.

ಈ ಸರ್ವೇಗಳಲ್ಲಿ ಒಬ್ಬ ವ್ಯಕ್ತಿಯು ವರ್ಷದ 365 ದಿನಗಳಲ್ಲಿ 182 ದಿನ ಕೆಲಸ ಮಾಡಿದರೆ ಆತನನ್ನು ಉದ್ಯೋಗಿ ಎಂದು ಪರಿಗಣಿಸುತ್ತದೆ. ಅಂದರೆ ಆರು ತಿಂಗಳು ಕೆಲಸ ಮಾಡಿ ಇನ್ನು ಆರು ತಿಂಗಳು ಕೆಲಸವಿಲ್ಲದಿದ್ದರೂ ಸಹ ಅವರು ಉದ್ಯೋಗಿಗಳ ಪಟ್ಟಿಗೆ ಸೇರುತ್ತಾರೆ. ಹಾಗಾಗಿ ಮೇಲಿನ ಅರ್ಥಶಾಸ್ತ್ರಜ್ಞರು ಊಹೆ ಮಾಡಿದ್ದಕ್ಕಿಂತಲೂ ಹೆಚ್ಚಿನ ಉದ್ಯೋಗ ಕಡಿತವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...